Sunday, July 13, 2025

ಕನಕ ವಿದ್ಯಾಸಂಸ್ಥೆಯಲ್ಲಿ ಗುರುಪೂರ್ಣಿಮೆ

ಭದ್ರಾವತಿ ಹಳೇನಗರ, ಶ್ರೀ ಬಸವೇಶ್ವರ ವೃತ್ತ, ತಾಲೂಕು ಕುರುಬರ ಸಂಘ ಆಶ್ರಿತದ ಶ್ರೀ ಕನಕ ವಿದ್ಯಾ ಸಂಸ್ಥೆ ಆವರಣದಲ್ಲಿ ಗುರು ಪೂರ್ಣಿಮೆ ಅಂಗವಾಗಿ ದಾಸಶ್ರೇಷ್ಠ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. 
    ಭದ್ರಾವತಿ : ಹಳೇನಗರ, ಶ್ರೀ ಬಸವೇಶ್ವರ ವೃತ್ತ, ತಾಲೂಕು ಕುರುಬರ ಸಂಘ ಆಶ್ರಿತದ ಶ್ರೀ ಕನಕ ವಿದ್ಯಾ ಸಂಸ್ಥೆ ಆವರಣದಲ್ಲಿ ಗುರು ಪೂರ್ಣಿಮೆ ಅಂಗವಾಗಿ ದಾಸಶ್ರೇಷ್ಠ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. 
    ತಾಲೂಕು ಕುರುಬರ ಸಂಘದ ಅಧ್ಯಕ್ಷ ಬಿ.ಎಂ ಸಂತೋಷ್ ಕನಕದಾಸರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರತಿ ವರ್ಷದಂತೆ ಈ ಬಾರಿ ವಿದ್ಯಾಸಂಸ್ಥೆ ವತಿಯಿಂದ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಗುರುಪೂರ್ಣಿಮೆ ಆಚರಿಸಲಾಯಿತು. 
    ವಿದ್ಯಾಸಂಸ್ಥೆ ಮಕ್ಕಳಿಗೆ ಗುರುವಂದನಾ ಕಾರ್ಯಕ್ರಮದ ವಿಶೇಷತೆ ಹಾಗು ಗುರುಗಳ ಮಹತ್ವ ತಿಳಿಸಿಕೊಡಲಾಯಿತು. ನಂತರ ಸಿಹಿ ಹಂಚಲಾಯಿತು. 
    ಸಂಘದ ಉಪಾಧ್ಯಕ್ಷ ಬಿ.ಎಸ್ ಮಂಜುನಾಥ್, ಕಾರ್ಯದರ್ಶಿ ಕೆ.ಎನ್ ರಾಜೇಶ್ ಹಾಗು ವಿದ್ಯಾಸಂಸ್ಥೆ ಮುಖ್ಯೋಪಾಧ್ಯಾಯರಾದ ಸಿ.ಡಿ ಮಂಜುನಾಥ್ ಮತ್ತು ಹರೀಶ್ ಹಾಗು ಶಿಕ್ಷಕ ವೃಂದ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.  

No comments:

Post a Comment