ಭದ್ರಾವತಿ: ಹಳೇನಗರ ಬಸವೇಶ್ವರ ವೃತ್ತದ ತಾಲೂಕು ಕುರುಬರ ಸಂಘದ ಕಾರ್ಯಕಾರಿ ಸಮಿತಿ ಚುನಾವಣೆ ಜು.೨೭ರ ಭಾನುವಾರ ಬೆಳಿಗ್ಗೆ ೯ ಗಂಟೆಯಿಂದ ೪ ಗಂಟೆವರೆಗೆ ನಡೆಯಲಿದೆ.
ಕಾರ್ಯಕಾರಿ ಸಮಿತಿ ೩ ವರ್ಷಗಳ ಅವಧಿಗೆ ಒಟ್ಟು ೧೫ ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು, ಹಳೇನಗರ ಬಸವೇಶ್ವರ ವೃತ್ತದ ಶ್ರೀ ಕನಕ ವಿದ್ಯಾಸಂಸ್ಥೆಯಲ್ಲಿ ಮತದಾನ ನಡೆಯಲಿದೆ. ಈಗಾಗಲೇ ಅಭ್ಯರ್ಥಿಗಳು ಪ್ರಚಾರ ಕಾರ್ಯದಲ್ಲಿ ತೊಡಗಿದ್ದು, ಈ ಹಿಂದಿನ ಚುನಾವಣೆಗಳಲ್ಲಿ ಮತದಾರರು ಹೆಚ್ಚಿನ ಉತ್ಸಾಹದಿಂದ ಮತದಾನದಲ್ಲಿ ಪಾಲ್ಗೊಂಡು ಗಮನ ಸೆಳೆದಿದ್ದರು. ಈ ಬಾರಿ ಸಹ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಭರವಸೆ ಅಭ್ಯರ್ಥಿಗಳು ಹೊಂದಿದ್ದಾರೆ.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ