ಭಾನುವಾರ, ಜುಲೈ 20, 2025

ವಿಶೇಷ ಚೇತನ ಮಕ್ಕಳ ಸೇವೆ ಪುಣ್ಯದ ಕೆಲಸ : ಎ.ಕೆ ನಾಗೇಂದ್ರಪ್ಪ

ಭದ್ರಾವತಿ ಮಾಚೇನಹಳ್ಳಿ ಡೈರಿ ಸಮೀಪದ ಮದರ್ ತೆರೇಸಾ ವಸತಿ ಶಾಲೆಯ ೧ ರಿಂದ ೧೦ನೇ ತರಗತಿ ಶ್ರವಣ ನ್ಯೂನ್ಯತೆಯುಳ್ಳ ವಿಶೇಷ ಚೇತನ ಮಕ್ಕಳಿಗೆ ಹಾಸಿಗೆ ಹೊದಿಕೆ(ಬೆಡ್ ಶೀಟ್), ಛತ್ರಿ ಹಾಗು ಬ್ಯಾಗ್ ವಿತರಿಸುವ ಕಾರ್ಯಕ್ರಮ ಆಯೋಜಿಸಲಾಗಿತ್ತು. 
    ಭದ್ರಾವತಿ: ವಿಶೇಷ ಚೇತನ ಮಕ್ಕಳ ಸೇವೆ ಮಾಡುವುದು ಪುಣ್ಯದ ಕೆಲಸವಾಗಿದ್ದು, ಇಂತಹ ಮಕ್ಕಳ ಬೆಳವಣಿಗೆಗೆ ಸಮಾಜದ ಪ್ರತಿಯೊಬ್ಬರು ಕೈಜೋಡಿಸಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಹೇಳಿದರು. 
    ಅವರು ಮಾಚೇನಹಳ್ಳಿ ಡೈರಿ ಸಮೀಪದ ಮದರ್ ತೆರೇಸಾ ವಸತಿ ಶಾಲೆಯ ೧ ರಿಂದ ೧೦ನೇ ತರಗತಿ ಶ್ರವಣ ನ್ಯೂನ್ಯತೆಯುಳ್ಳ ವಿಶೇಷ ಚೇತನ ಮಕ್ಕಳಿಗೆ ಹಾಸಿಗೆ ಹೊದಿಕೆ(ಬೆಡ್ ಶೀಟ್), ಛತ್ರಿ ಹಾಗು ಬ್ಯಾಗ್ ವಿತರಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. 
    ವಿಶೇಷ ಚೇತನ ಮಕ್ಕಳ ಶ್ರೇಯೋಭಿವೃದ್ಧಿಗೆ ಪ್ರತಿಯೊಬ್ಬರು ಕೈಜೋಡಿಸುವ ಮೂಲಕ ಅವರು ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳುವಂತೆ ಮಾಡಬೇಕೆಂದರು. 
    ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಜೋಸ್ ಮ್ಯಾಥೋ ಮಾತನಾಡಿ, ವಿಶೇಷ ಚೇತನ ಮಕ್ಕಳನ್ನು ಗುರುತಿಸಿ ಅವರ ಶೈಕ್ಷಣಿಕ ಚಟುವಟಿಕೆಗಳಿಗೆ ಪೂರಕವಾಗುವಂತೆ ನೆರವಾಗುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು.
      ಬೆಂಗಳೂರಿನ ದಾನಿಗಳಾದ ಪಲ್ಲವಿ-ಸಾಗರ್ ದಂಪತಿ ಮತ್ತು ಅಮೂಲ್ಯ ಮಕ್ಕಳಿಗೆ ಹಾಸಿಗೆ ಹೊದಿಕೆ (ಬೆಡ್ ಶೀಟ್), ಛತ್ರಿ ಮತ್ತು ಬ್ಯಾಗ್ ವಿತರಿಸಿದರು. ಕ್ಷೇತ್ರ ಶಿಕ್ಷಣ ಸಂಪನ್ಮೂಲ ಸಮನ್ವಯಾಧಿಕಾರಿ ವಿ.ಎಚ್ ಪಂಚಾಕ್ಷರಿ, ಶಾಲೆಯ ಅಧ್ಯಕ್ಷರಾದ ಫಾದರ್ ಎನ್.ಎಸ್ ಜೋಸೆಫ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ನೀತ ಸ್ವಾಗತಿಸಿ ನಿಶಾ ವಂದಿಸಿದರು. ಮಕ್ಕಳ ಪಟ್ಟಿಯನ್ನು ರೂಪ ವಾಚಿಸಿದರು. 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ