Monday, July 7, 2025

ಜು.೮ರಂದು `ಭಾರತಾಂಬೆಗೆ ಗೀತ ನಮನ'


   
ಭದ್ರಾವತಿ: ಪ್ರಸ್ತುತ ದೇಶದಲ್ಲಿ ನಡೆಯುತ್ತಿರುವ ಪ್ರಕೃತಿ ವಿಕೋಪಗಳು, ಸಾವು-ನೋವುಗಳು, ಮಿತಿ ಮೀರುತ್ತಿರುವ ದೇಶದ್ರೋಹಿ ಉಗ್ರಗಾಮಿ ಚಟುವಟಿಕೆಗಳಿಗೆ ಅಂತ್ಯ ಹಾಡಲು, ದೇಶವಾಸಿಗಳು ಶಾಂತಿ, ನೆಮ್ಮದಿಯಿಂದ ಜೀವಿಸಲು, ಭಾರತಾಂಬೆಗೆ ಪ್ರಾರ್ಥಿಸುವ ಹಾಗು ದೇಶದ ರಕ್ಷಣೆಯಲ್ಲಿ ಹಗಲಿರುಳು ಕಾರ್ಯ ನಿರ್ವಹಿಸುತ್ತಿರುವ ಯೋಧರ ಯೋಗಕ್ಷೇಮಕ್ಕಾಗಿ ದೇಶ ಭಕ್ತಿಗೀತೆಗಳ ವಿಶೇಷ ಕಾರ್ಯಕ್ರಮ ನಗರದ ಭಾವಸಾರ ಕ್ಷತ್ರೀಯ ಮಹಿಳಾ ಮಂಡಳಿ ವತಿಯಿಂದ ಪ್ರಪ್ರಥಮ ಬಾರಿಗೆ `ಭಾರತಾಂಬೆಗೆ ಗೀತ ನಮನ' ಎಂಬ ಹೆಸರಿನಲ್ಲಿ ಜು.೮ರ ಮಂಗಳವಾರ ಸಂಜೆ ೫ ಗಂಟೆಗೆ ಮಹಾತ್ಮ ಗಾಂಧಿ ರಸ್ತೆ (ಟಿ.ಕೆ ರಸ್ತೆ)ಯ ಶ್ರೀ ಪಾಂಡುರಂಗ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ.
    ದೇಶದ ಸಮಗ್ರತೆ, ಅಖಂಡತೆ, ಐಕ್ಯತೆಗಾಗಿ ಏರ್ಪಡಿಸಲಾಗಿರುವ ಈ ವಿಶೇಷ ಕಾರ್ಯಕ್ರಮಕ್ಕೆ ದೇಶಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯಶಸ್ವಿಗೊಳಿಸಿ ಕೊಡಬೇಕಾಗಿ ಭಾವಸಾರ ಕ್ಷತ್ರೀಯ ಮಹಿಳಾ ಮಂಡಳಿ ಅಧ್ಯಕ್ಷೆ ಕಲ್ಪನಾ ಉಮೇಶ್ ಗುಜ್ಜಾರ್ ಹಾಗು ವಿಶ್ವ ಹಿಂದೂ ಪರಿಷತ್, ಮಾತೃ ಮಂಡಳಿ ಅಧ್ಯಕ್ಷೆ ಸ್ವಪ್ನ ಕುಮಾರ್ ತೇಲ್ಕರ್ ಮನವಿ ಮಾಡಿದ್ದಾರೆ.

No comments:

Post a Comment