ಭದ್ರಾವತಿ: ನಗರದ ಕನ್ನಡ ನಾಡು ನಡೆ-ನುಡಿ ಬಿಂಬಿಸುವ ವೇದಿಕೆ ಭೂಮಿಕಾ ವತಿಯಿಂದ ಜು.೨೦ರ ಭಾನುವಾರ ಭಾವ-ಗಾನ-ಗೌರವ ಡಾ. ಎಚ್.ಎಸ್.ವಿ ಸಂಸ್ಮರಣೆ ಕಾರ್ಯಕ್ರಮದ ಅಂಗವಾಗಿ ಆಯ್ದ ಗೀತೆಗಳ ಗಾಯನ ಆಯೋಜಿಸಲಾಗಿದೆ.
ಹಳೇನಗರ ಶ್ರೀ ರಾಮೇಶ್ವರ ದೇವಸ್ಥಾನ ಹಿಂಭಾಗದ ಶ್ರೀ ಗಾಯಿತ್ರಿ ಧರ್ಮ ಶಾಲಾ ಭವನದಲ್ಲಿ ಆಯೋಜಿಸಲಾಗಿದೆ. ಭೂಮಿಕಾ ವೇದಿಕೆ ಅಧ್ಯಕ್ಷ, ವೈದ್ಯ ಡಾ. ಕೃಷ್ಣ ಎಸ್. ಭಟ್ ಅಧ್ಯಕ್ಷತೆ ವಹಿಸಲಿದ್ದು, ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಲಾಗಿದೆ.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ