ಕೆ.ಎಸ್ ವಿಜಯಕುಮಾರ್
ಭದ್ರಾವತಿ: ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ 2024-25ನೇ ಸಾಲಿನ ಪರೀಕ್ಷೆಯಲ್ಲಿ ಅತಿ ಹೆಚ್ಚು ಶೇ.85ಕ್ಕೂ ಹೆಚ್ಚಿನ ಅಂಕ ಪಡೆದು ಉತ್ತೀರ್ಣರಾದ ತಾಲೂಕಿನ ವೀರಶೈವ-ಲಿಂಗಾಯತ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಶಾಖೆ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಗುವುದು ಎಂದು ಮಹಾಸಭಾ ತಾಲೂಕು ಅಧ್ಯಕ್ಷ ಕೆ.ಎಸ್ ವಿಜಯ ಕುಮಾರ್ ತಿಳಿಸಿದ್ದಾರೆ.
ಸಮಾಜದ ಪ್ರತಿಭಾವಂತ ಆಸಕ್ತ ವಿದ್ಯಾರ್ಥಿಗಳು ಜು. 18ರೊಳಗೆ ಅಂಕ ಪಟ್ಟಿ ಹಾಗು ಆಧಾರ್ ಕಾರ್ಡ್ ನಕಲು ಪ್ರತಿ ಮತ್ತು ಒಂದು ಪಾಸ್ ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗೆ ಮಹಾಸಭಾ ಉಪಾಧ್ಯಕ್ಷೆ, ವಕೀಲರಾದ ಆರ್.ಎಸ್ ಶೋಭಾ, ಮೊ: 9902008155, ನಿರ್ದೇಶಕರಾದ ಎನ್.ಎಸ್ ಮಲ್ಲಿಕಾರ್ಜುನಯ್ಯ, ಮೊ: 9480138972, ಸಾಗರ್, ಮೊ: 8618479341 ಮತ್ತು ರಮೇಶ್, ಮೊ: 8073148673 ಸಂಖ್ಯೆಗಳಿಗೆ ಸಂಪರ್ಕಿಸಿ ಅರ್ಜಿ ಸಲ್ಲಿಸುವಂತೆ ಕೋರಿದ್ದಾರೆ.
No comments:
Post a Comment