ನಂಜುಂಡಸ್ವಾಮಿ
ಭದ್ರಾವತಿ : ತಾಲೂಕು ಸಮಾಜ ಕಲ್ಯಾಣ ಇಲಾಖೆ ಡಿ' ದರ್ಜೆ ನೌಕರ, ನಗರದ ಬೊಮ್ಮನಕಟ್ಟೆ ನಿವಾಸಿ ನಂಜುಂಡಸ್ವಾಮಿ(೫೯) ಶುಕ್ರವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನ ಹೊಂದಿದರು.
ಇವರಿಗೆ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕಿ, ಪತ್ನಿ ನೀಲಮ್ಮ ಸೇರಿದಂತೆ ಪುತ್ರಿ ಹಾಗು ಇಬ್ಬರು ಪುತ್ರರಿದ್ದಾರೆ. ನಂಜುಂಡಸ್ವಾಮಿಯವರು ಕರ್ನಾಟಕ ರಾಜ್ಯ ಸರ್ಕಾರಿ ಡಿ' ದರ್ಜೆ ನೌಕರರ ಸಂಘದ ತಾಲೂಕು ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು. ಇವರ ಅಂತ್ಯಕ್ರಿಯೆ ಶನಿವಾರ ಬೆಳಗ್ಗೆ ೧೧ ಗಂಟೆಗೆ ಬೊಮ್ಮನಕಟ್ಟೆ ರುದ್ರಭೂಮಿಯಲ್ಲಿ ನಡೆಯಲಿದೆ. ಇವರ ನಿಧನಕ್ಕೆ ಡಿ' ದರ್ಜೆ ಸರ್ಕಾರಿ ನೌಕರರು ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ