ಸೋಮವಾರ, ಜುಲೈ 21, 2025

ಜು.೨೩ರಂದು ಪ್ರತಿಭಾ ಪುರಸ್ಕಾರ

    ಭದ್ರಾವತಿ : ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಶಾಖೆ ವತಿಯಿಂದ ಜು.೨೩ರಂದು ಬೆಳಿಗ್ಗೆ ೧೦.೩೦ಕ್ಕೆ ಸಿದ್ಧಾರೂಢ ನಗರದ ಶ್ರೀ ಬಸವೇಶ್ವರ ಸಭಾ ಭವನದಲ್ಲಿ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ. 
    ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ವೀರಸಿಂಹಾಸನಾಧೀಶ್ವರ ಶ್ರೀ ಜಗದ್ಗುರು ಪ್ರಸನ್ನ ರೇಣುಕ ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ದಿವ್ಯ ಸಾನಿಧ್ಯ ವಹಿಸಲಿದ್ದು, ಎಡೆಯೂರು ಕ್ಷೇತ್ರದ ಶ್ರೀ ರೇಣುಕ ಶಿವಾಚಾರ್ಯ ಸ್ವಾಮೀಜಿ, ಬಿಳಿಕಿ ಹಿರೇಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ಉಪಸ್ಥಿತರಿರುವರು. 
    ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಮಹಾಸಭಾ ತಾಲೂಕು ಶಾಖೆ ಅಧ್ಯಕ್ಷ ಕೆ.ಎಸ್ ವಿಜಯಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಉಪಾಧ್ಯಕ್ಷರಾದ ಅಣಬೇರು ರಾಜಣ್ಣ, ಎಸ್.ಎಸ್ ಗಣೇಶ್ ಮತ್ತು ಸಂಸದ ಬಿ.ವೈ ರಾಘವೇಂದ್ರ ಅವರಿಗೆ ಗೌರವ ಸಮರ್ಪಣೆ ನಡೆಯಲಿದೆ. 
    ಮಹಾಸಭಾ ರಾಜ್ಯಾಧ್ಯಕ್ಷ ಶಂಕರ ಮಹಾದೇವ ಬಿದರಿ ಪ್ರತಿಭಾ ಪುರಸ್ಕಾರ ವಿತರಿಸಲಿದ್ದು, ಶಾಸಕ ಬಿ.ಕೆ ಸಂಗಮೇಶ್ವರ್, ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ, ನಗರಸಭೆ ಅಧ್ಯಕ್ಷೆ ಗೀತಾ ರಾಜ್ ಕುಮಾರ್ ಮತ್ತು ಮಾಜಿ ಸದಸ್ಯ ಎಸ್. ರುದ್ರೇಗೌಡ ಅವರಿಗೆ ಸನ್ಮಾನ ನಡೆಯಲಿದೆ.  
    ಎಚ್.ಎಂ ರೇಣುಕ ಪ್ರಸನ್ನ, ನಟರಾಜ ಸಾಗರನಹಳ್ಳಿ, ಎಂ.ಜಿ ಶಶಿಕಲಾಮೂರ್ತಿ, ಡಿ.ಬಿ ಗಿರೀಶ್ ಕುಮಾರ್, ಎನ್.ವಿ ಈರೇಶ್, ರುದ್ರಮುನಿ ಎನ್. ಸಜ್ಜನ್, ಬಳ್ಳೇಕೆರೆ ಸಂತೋಷ್, ಬಿ.ಎಂ ಮಲ್ಲಿಕಾರ್ಜುನಸ್ವಾಮಿ, ಪ್ರವೀಣ್, ಗುರುಕುಮಾರ್ ಪಾಟೀಲ್, ಸುಧೀರ್, ಉಮೇಶ್ ಮತ್ತು ಶಿವಕುಮಾರ್ ಹಾಗು ಹಿರಿಯ ಗಣ್ಯರಾದ ಎಚ್.ವಿ ಶಿವರುದ್ರಪ್ಪ, ವಿಶ್ವನಾಥ ಕೋಠಿ, ಡಾ. ವಿಜಯದೇವಿ, ಜಿ.ಕೆ ನವಿಲಪ್ಪ, ಕೆ.ಬಿ ಪರಮೇಶ್ವರಪ್ಪ ಮತ್ತು ಎಚ್.ಎಸ್ ಮಲ್ಲೇಶಪ್ಪ ಸೇರಿದಂತೆ ಇನ್ನಿತರರು ಪಾಲ್ಗೊಳ್ಳಲಿದ್ದಾರೆ. 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ