Saturday, July 12, 2025

ವಿಶೇಷ ವಿಕಲಚೇತನ ಮಕ್ಕಳು ಸಮಾಜದ ಆಸ್ತಿ : ಎ.ಕೆ ನಾಗೇಂದ್ರಪ್ಪ

ಭದ್ರಾವತಿ ಕ್ಷೇತ್ರ ಶಿಕ್ಷಣ ಸಂಪನ್ಮೂಲ ಸಮನ್ವಯಾಧಿಕಾರಿಗಳ ಕಛೇರಿ(ಬಿಆರ್‌ಸಿ)ಯಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಸುಮಾರು ೩೦ ವಿಶೇಷ ವಿಕಲಚೇತನ ಮಕ್ಕಳನ್ನು ಅಭಿನಂದಿಸಲಾಯಿತು. 
    ಭದ್ರಾವತಿ: ವಿಶೇಷಚೇತನ ಮಕ್ಕಳಲ್ಲಿ ಒಂದು ವಿಶೇಷತೆ ಇದೆ. ಇವರು ಸಮಾಜದ ಆಸ್ತಿಯಾಗಿದ್ದು, ಪ್ರತಿಯೊಬ್ಬರು ಸಹ ಇವರ ಏಳಿಗೆಗೆ ಶ್ರಮಿಸಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಹೇಳಿದರು.
    ಅವರು ಕ್ಷೇತ್ರ ಶಿಕ್ಷಣ ಸಂಪನ್ಮೂಲ ಸಮನ್ವಯಾಧಿಕಾರಿಗಳ ಕಛೇರಿ(ಬಿಆರ್‌ಸಿ)ಯಲ್ಲಿ ಹಮ್ಮಿಕೊಳ್ಳಲಾಗಿದ್ದ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಸುಮಾರು ೩೦ ವಿಶೇಷ ವಿಕಲಚೇತನ ಮಕ್ಕಳಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. 
    ಪೋಷಕರು ವಿಶೇಷ ವಿಕಲಚೇತನ ಮಕ್ಕಳ ಪ್ರತಿಭೆಯನ್ನು ಗುರುತಿಸಿ ಅವರಲ್ಲಿ ಆತ್ಮವಿಶ್ವಾಸ ಮೂಡಿಸುವ ಜೊತೆಗೆ ಕಲಿಕಾ ಮನೋಭಾವನೆ ಪ್ರೋತ್ಸಾಹಿಸಬೇಕೆಂದರು. 


    ಶಿವಮೊಗ್ಗ ಸುಬ್ಬಯ್ಯ ಆಸ್ಪತ್ರೆ ವೈದ್ಯ ಡಾ. ಸುಜಿತ್ ಮಾತನಾಡಿ, ವಿಕಲಚೇತನ ಮಕ್ಕಳ ವೈಯಕ್ತಿಕ ಸ್ವಚ್ಛತೆ ಕುರಿತು ಹಾಗು ವಿಕಲಚೇತನ ಮಕ್ಕಳ ಉಸಿರಾಟ ಮತ್ತು ಅಸ್ತಮಾ ಕಾಯಿಲೆ ಕುರಿತು ಹಾಗು ಅದರಿಂದ ಉಂಟಾಗುವ ಸಮಸ್ಯೆಗಳ ಕುರಿತು ಮಾಹಿತಿ ನೀಡಿದರು.
    ಕ್ಷೇತ್ರ ಶಿಕ್ಷಣ ಸಂಪನ್ಮೂಲ ಸಮನ್ವಯಾಧಿಕಾರಿ ವಿ.ಎಚ್ ಪಂಚಾಕ್ಷರಿ, ಶಿವಮೊಗ್ಗ ಸುಬ್ಬಯ್ಯ ಆಸ್ಪತ್ರೆ ವ್ಯವಸ್ಥಾಪಕ ಕಾಂತರಾಜ್ ಹಾಗೂ ಇಸಿಓ ದಯಾನಂದ, ಬಿಆರ್‌ಪಿ ಗಂಗಾಧರ ಹಾಗು ಸಿಬ್ಬಂದಿ ವರ್ಗದವರು ಮತ್ತು ಪೋಷಕರು ಉಪಸ್ಥಿತರಿದ್ದರು. 
      ಟಿ.ಎನ್ ಪ್ರತಿಭಾ ಸ್ವಾಗತಿಸಿ, ವಿಶೇಷ ಮಕ್ಕಳ ಪಟ್ಟಿಯನ್ನು ಜಯಲಕ್ಷ್ಮಿ ವಾಚಿಸಿ, ತೀರ್ಥಪ್ಪ ವಂದಿಸಿದರು.  

No comments:

Post a Comment