ಭದ್ರಾವತಿ ನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಸಿ.ಎನ್ ರಸ್ತೆಗೆ ಚಾಚಿಕೊಂಡಿರುವ ಬೃಹತ್ ಮರದ ರೆಂಬೆ-ಕೊಂಬೆಗಳನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಶುಕ್ರವಾರ ಕಡಿತಲೆ ಮಾಡುವ ಮೂಲಕ ಸಾರ್ವಜನಿಕರಿಗೆ, ವಾಹನ ಸವಾರರಿಗೆ, ಪಾದಚಾರಿಗಳಿಗೆ ಹಾಗು ವ್ಯಾಪಾರಸ್ಥರಿಗೆ ಉಂಟಾಗುತ್ತಿದ್ದ ಸಮಸ್ಯೆಗಳನ್ನು ನಿಭಾಯಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಭದ್ರಾವತಿ : ನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಸಿ.ಎನ್ ರಸ್ತೆಗೆ ಚಾಚಿಕೊಂಡಿರುವ ಬೃಹತ್ ಮರದ ರೆಂಬೆ-ಕೊಂಬೆಗಳನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಶುಕ್ರವಾರ ಕಡಿತಲೆ ಮಾಡುವ ಮೂಲಕ ಸಾರ್ವಜನಿಕರಿಗೆ, ವಾಹನ ಸವಾರರಿಗೆ, ಪಾದಚಾರಿಗಳಿಗೆ ಹಾಗು ವ್ಯಾಪಾರಸ್ಥರಿಗೆ ಉಂಟಾಗುತ್ತಿದ್ದ ಸಮಸ್ಯೆಗಳನ್ನು ನಿಭಾಯಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸುಮಾರು ೫೦-೬೦ ವರ್ಷಗಳಿಗೂ ಹಳೇಯದಾದ ಬೃಹತ್ ಮರದ ರೆಂಬೆ-ಕೊಂಬೆಗಳು ಪ್ರಮುಖ ವಾಣಿಜ್ಯ ರಸ್ತೆಯಾಗಿರುವ ಸಿ.ಎನ್ ರಸ್ತೆಗೆ ಚಾಚಿಕೊಂಡಿದ್ದು, ಕೆಳಭಾಗದಲ್ಲಿ ಅಂಗಡಿಮುಂಗಟ್ಟುಗಳು, ಸಾರ್ವಜನಿಕ ಶೌಚಾಲಯ, ಖಾಸಗಿ ಬಸ್ ನಿಲ್ದಾಣ, ಆಟೋ ನಿಲ್ದಾಣಗಳಿವೆ. ಪ್ರತಿದಿನ ಜನಸಂದಣಿಯಿಂದ ಕೂಡಿರುವ ಸ್ಥಳವಾಗಿದ್ದು, ಅಲ್ಲದೆ ವಿದ್ಯುತ್ ತಂತಿಗಳು ಸಹ ಹಾದು ಹೋಗಿವೆ. ಹಲವಾರು ಬಾರಿ ರೆಂಬೆ-ಕೊಂಬೆಗಳು ಮುರಿದು ಬಿದ್ದು ಅವಘಡಗಳು ಸಂಭವಿಸಿವೆ. ಈ ಹಿನ್ನಲೆಯಲ್ಲಿ ಅರಣ್ಯ ಇಲಾಖೆಗೆ ದೂರುಗಳು ಸಲ್ಲಿಕೆಯಾಗಿವೆ.
ಸಾರ್ವಜನಿಕರಿಗೆ, ವಾಹನ ಸವಾರರಿಗೆ, ಪಾದಚಾರಿಗಳಿಗೆ ಹಾಗು ವ್ಯಾಪಾರಸ್ಥರಿಗೆ ಉಂಟಾಗುತ್ತಿದ್ದ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಅರಣ್ಯ ಇಲಾಖೆ ಮರದ ರೆಂಬೆ-ಕೊಂಬೆಗಳ ಕಡಿತಲೆಗೆ ಗುತ್ತಿಗೆ ನೀಡಿದೆ. ಈ ಹಿನ್ನಲೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಗುತ್ತಿಗೆದಾರರಿಗೆ ನೆರವಾಗಿ ಬೆಳಿಗ್ಗೆಯಿಂದ ಸುಮಾರು ೫-೬ ಗಂಟೆಗಳ ಕಾರ್ಯಾಚರಣೆ ನಡೆಸಿ ರೆಂಬೆ-ಕೊಂಬೆಗಳ ತೆರವು ಕಾರ್ಯ ಕೈಗೊಂಡಿದೆ.
ಮೆಸ್ಕಾಂ ಸಿಬ್ಬಂದಿಗಳು ವಿದ್ಯುತ್ ಕಡಿತಗೊಳಿಸಿ ವಿದ್ಯುತ್ ತಂತಿಗಳನ್ನು ತೆರವುಗೊಳಿಸುವ ಮೂಲಕ ಕಡಿತಲೆಗೆ ಸಹಕರಿಸಿದ್ದು, ಸಂಚಾರಿ ಪೊಲೀಸರು ರಸ್ತೆಯ ಎರಡು ಬದಿ ವಾಹನ ಸಂಚಾರ ಸ್ಥಗಿತಗೊಳಿಸಿ ಪರ್ಯಾಯ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿಕೊಡುವ ಮೂಲಕ ಕಾರ್ಯಾಚರಣೆಯಲ್ಲಿ ಕೈಜೋಡಿಸಿದ್ದಾರೆ. ವಲಯ ಅರಣ್ಯಾಧಿಕಾರಿ ದುಗ್ಗಪ್ಪ ಸ್ಥಳದಲ್ಲಿಯೇ ಬೀಡುಬಿಟ್ಟಿದ್ದು, ಯಶಸ್ವಿ ಕಾರ್ಯಾಚರಣೆಗೆ ಮುಂದಾಗಿದ್ದಾರೆ.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ