ಸೋಮವಾರ, ಆಗಸ್ಟ್ 11, 2025

ಮೆಸ್ಕಾಂ, ಆಧಾರ್ ಕೌಂಟರ್, ಅಂಚೆ ಕಛೇರಿಗೆ ಸ್ಥಳಾವಕಾಶ ಕಲ್ಪಿಸಿಕೊಡಿ

ಪೌರಾಯುಕ್ತರಿಗೆ ಶ್ರೀ ಡಿ.ದೇವರಾಜ ಅರಸು ಜನಸ್ಪಂದನ ಸೇವಾ ಟ್ರಸ್ಟ್ ಮನವಿ 


ಭದ್ರಾವತಿ ನಗರದ ಜನ್ನಾಪುರ ಶ್ರೀ ಡಿ.ದೇವರಾಜ ಅರಸು ಜನಸ್ಪಂದನ ಸೇವಾ ಟ್ರಸ್ಟ್ ಛೇರ್ಮನ್, ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಆರ್. ವೇಣುಗೋಪಾಲ್ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗಾಗಿ ಹೋರಾಟ ಪ್ರಾರಂಭಿಸಿದ ೫೦ನೇ ವರ್ಷದ ನೆನಪಿಗಾಗಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ  ನಗರಸಭೆ ಪೌರಾಯುಕ್ತ ಕೆ.ಎನ್ ಹೇಮಂತ್‌ರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ. 
    ಭದ್ರಾವತಿ: ನಗರದ ಜನ್ನಾಪುರ ಶ್ರೀ ಡಿ.ದೇವರಾಜ ಅರಸು ಜನಸ್ಪಂದನ ಸೇವಾ ಟ್ರಸ್ಟ್ ಛೇರ್ಮನ್, ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಆರ್. ವೇಣುಗೋಪಾಲ್ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗಾಗಿ ಹೋರಾಟ ಪ್ರಾರಂಭಿಸಿದ ೫೦ನೇ ವರ್ಷದ ನೆನಪಿಗಾಗಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ  ನಗರಸಭೆ ಪೌರಾಯುಕ್ತ ಕೆ.ಎನ್ ಹೇಮಂತ್‌ರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ. 
    ಟ್ರಸ್ಟ್‌ವತಿಯಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರ ಹಾಗು ನಗರಸಭೆ ಸಹಕಾರದೊಂದಿಗೆ ಕ್ಷೇತ್ರವನ್ನು ಮಾದರಿ ನಗರವನ್ನಾಗಿ ಮಾಡಲು ಪಣತೊಟ್ಟಿರುವ ಹಿನ್ನಲೆಯಲ್ಲಿ ಬೇಡಿಕೆಗಳನ್ನು ಈಡೇರಿಸಲು ಮುಂದಾಗುವಂತೆ ಕೋರಲಾಗಿದೆ.  
    ನಗರಸಭೆ ನ್ಯೂಟೌನ್ ಶಾಖಾ ಕಛೇರಿ ಆವರಣಕ್ಕೆ ಒಮ್ಮೆ ಭೇಟಿ ನೀಡಿ ಪರಿಶೀಲನೆ ನಡೆಸುವ ಮೂಲಕ ಆವರಣದಲ್ಲಿ `ಮೆಸ್ಕಾಂ ಕೌಂಟರ್, ಆಧಾರ್ ಕೌಂಟರ್ ಮತ್ತು ಅಂಚೆ ಕಛೇರಿ ಕಾರ್ಯಾರಂಭಮಾಡಲು ಸ್ಥಳಾವಕಾಶ ಕಲ್ಪಿಸಿಕೊಡುವುದು. ನಗರಸಭೆ ವತಿಯಿಂದ ಹಸಿಕಸ-ಒಣಕಸ ಸಂಗ್ರಹಣೆ ಮಾಡುವ ಸಂಬಂಧ ಮನೆ ಮನೆಗಳಿಗೆ ಸಮರ್ಪಕವಾಗಿ ಕಸದ ಡಬ್ಬಿಗಳನ್ನು ವಿತರಣೆ ಮಾಡದೇ ಇರುವುದರಿಂದ ಸಾಕಷ್ಟು ಸಮಸ್ಯೆಗಳು ಎದುರಾಗುತ್ತಿದ್ದು, ಈ ಹಿನ್ನಲೆಯಲ್ಲಿ ಪರಿಶೀಲನೆ ನಡೆಸಿ ಕಸದ ಡಬ್ಬಿಗಳನ್ನು ವಿತರಣೆ ಮಾಡದೆ ಇರುವ ಮನೆಗಳಿಗೆ ಕಸದ ಡಬ್ಬಿಗಳನ್ನು ವಿತರಿಸಲು ಕ್ರಮಕೈಗೊಳ್ಳುವಂತೆ ಮನವಿ ಮಾಡಲಾಗಿದೆ. 
    ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಬಿ.ವಿ ಗಿರಿ, ಸಂಚಾಲಕ ಎಂ.ವಿ ಚಂದ್ರಶೇಖರ್, ನಗರಸಭೆ ಹಿರಿಯ ಸದಸ್ಯ ವಿ. ಕದಿರೇಶ್, ಮಾಜಿ ಸದಸ್ಯ ಶಶಿಧರಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ