ಬುಧವಾರ, ಆಗಸ್ಟ್ 20, 2025

ಆಕಸ್ಮಿಕವಾಗಿ ಗುಂಡಿಯೊಳಗೆ ಬಿದ್ದಿದ್ದ ೨ ಹಸುಗಳ ರಕ್ಷಣೆ

ಭದ್ರಾವತಿ ನಗರಸಭೆ ವ್ಯಾಪ್ತಿಯ ಸಿದ್ಧಾರೂಢ ನಗರದಲ್ಲಿ ಆಕಸ್ಮಿಕವಾಗಿ ಗುಂಡಿಯೊಳಗೆ ಬಿದ್ದಿದ್ದ ಎರಡು ಹಸುಗಳನ್ನು ಅಗ್ನಿಶಾಮಕ ದಳ ಸಿಬ್ಬಂದಿಗಳು ಸ್ಥಳಿಯರೊಂದಿಗೆ ರಕ್ಷಿಸಿರುವ ಘಟನೆ ನಡೆದಿದೆ.
    ಭದ್ರಾವತಿ: ನಗರಸಭೆ ವ್ಯಾಪ್ತಿಯ ಸಿದ್ಧಾರೂಢ ನಗರದಲ್ಲಿ ಆಕಸ್ಮಿಕವಾಗಿ ಗುಂಡಿಯೊಳಗೆ ಬಿದ್ದಿದ್ದ ಎರಡು ಹಸುಗಳನ್ನು ಅಗ್ನಿಶಾಮಕ ದಳ ಸಿಬ್ಬಂದಿಗಳು ಸ್ಥಳಿಯರೊಂದಿಗೆ ರಕ್ಷಿಸಿರುವ ಘಟನೆ ನಡೆದಿದೆ. 
    ಶ್ರೀ ಲಕ್ಷ್ಮಿರಂಗನಾಥಸ್ವಾಮಿ ನಿಲಯದ ಪಕ್ಕದಲ್ಲಿ ನಿರ್ಮಾಣ ಹಂತದ ಪಾಯ ಹಾಕಲು ತೆಗೆಸಿದ್ದ ಮಣ್ಣಿನ ಗುಂಡಿಯೊಳಗೆ ಲಿಂಗಪ್ಪ ಎಂಬುವವರಿಗೆ ಸೇರಿದ ೨ ಹಸುಗಳು ಆಕಸ್ಮಿಕವಾಗಿ ಬಿದ್ದು, ಸಿಲುಕಿಕೊಂಡಿವೆ. ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಠಾಣೆ ಸಿಬ್ಬಂದಿಗಳು ಸ್ಥಳೀಯರ ನೆರವಿನೊಂದಿಗೆ ಹೋಸ್ ಹಾಗು ಹಗ್ಗ ಬಳಸಿ ಹಸುಗಳನ್ನು ಮೇಲಕ್ಕೆತ್ತಿ ರಕ್ಷಿಸಿದ್ದಾರೆ.  
    ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ದಳದ ಸಹಾಯಕ ಠಾಣಾಧಿಕಾರಿ ಸಿ.ಎಚ್ ಹುಲಿಯಪ್ಪ, ಮಂಜಪ್ಪ ಮತ್ತು ಬಾಬು ಗೌಡ, ಫೈರ್ ಮ್ಯಾನ್ ಪ್ರಜ್ವಲ್ ಮತ್ತು ವಾಹನ ಚಾಲಕ ಸುರೇಶ್ ಪಾಲ್ಗೊಂಡಿದ್ದರು. 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ