ಭದ್ರಾವತಿ : ಇಲ್ಲಿಗೆ ಸಮೀಪದ ಶ್ರೀ ಕ್ಷೇತ್ರ ಭದ್ರಗಿರಿ ಶ್ರೀ ಶಿವಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಆ.೧೬ರ ಶನಿವಾರ ಆಡಿ ಕೃತಿಕ ಕಾವಡಿ ಜಾತ್ರಾ ಉತ್ಸವ ನಡೆಯಲಿದೆ.
ಶ್ರೀ ಕ್ಷೇತ್ರದ ಶಿವೈಕ್ಯರಾದ ಶ್ರೀ ಮಹಾ ಸಿದ್ದರ್ ಸ್ವಾಮಿಯವರ ಭಕ್ತಿ ಪೂರ್ವಕ ನಮನಗಳೊಂದಿಗೆ ಆ.೧೧ ರಿಂದ ೧೮ರವರೆಗೆ ಜಾತ್ರಾ ಮಹೋತ್ಸವ ನಡೆಯಲಿದ್ದು, ೧೧ರ ಬೆಳಿಗ್ಗೆ ೬ರಂದು ಧ್ವಜಾರೋಹಣದ ಮೂಲಕ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಲಾಗುವುದು. ೧೫ರಂದು ಭರಣಿ ಕಾವಡಿ ಉತ್ಸವ, ಬೆಳಗಿನ ಜಾವ ೪ ಗಂಟೆಯಿಂದ ವಿಶ್ವರೂಪ ದರ್ಶನ ಆರಂಭ, ೫ ರಿಂದ ಮಹಾಪೂಜೆ, ೮ ಗಂಟೆಗೆ ಸಂಧಿಪೂಜೆ, ೧೨ಕ್ಕೆ ಉಚ್ಚಿಕಾಲ ಪೂಜೆ, ಸಂಜೆ ೫.೩೦ಕ್ಕೆ ದೀಪಾರಧನೆ, ರಾತ್ರಿ ೯ಕ್ಕೆ ಸಂಧಿಪೂಜೆ, ೧೨ಕ್ಕೆ ವಿಶೇಷ ಅಭಿಷೇಕ, ಆರಾಧನೆ ನಡೆಯಲಿದೆ.
ಆ.೧೬ರಂದು ಆಡಿಕೃತಿಕಾ ಕಾವಡಿ ಉತ್ಸವ ಬೆಳಗಿನ ಜಾವ ೪ ಗಂಟೆಯಿಂದ ವಿಶ್ವರೂಪ ದರ್ಶನ ಮತ್ತು ಅಭಿಷೇಕ, ೫ ರಿಂದ ಉತ್ಸವ ಪೂಜೆ ಹಾಗು ಕಾವಡಿ ಹರಕೆ ಸಮರ್ಪಣೆ, ಮಧ್ಯಾಹ್ನ ೧೨ಕ್ಕೆ ಮಹಾಪೂಜೆ, ಸಂಜೆ ೫.೩೦ ರಿಂದ ದೀಪಾರಾಧನೆ, ರಾತ್ರಿ ೧೦ಕ್ಕೆ ಅರ್ಧ ಜಾಮಪೂಜೆ ಜರುಗಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸ್ವಾಮಿಯ ಕೃಪೆಗೆ ಪಾತ್ರರಾಗುವಂತೆ ಕೋರಲಾಗಿದೆ.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ