ರಮೇಶ್
ಭದ್ರಾವತಿ : ನಗರಸಭೆ ವ್ಯಾಪ್ತಿಯ ಸುರಗಿತೋಪು, ೪ನೇ ಕ್ರಾಸ್ ನಿವಾಸಿ ಹಾಗು ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿಯವರ ಅಭಿಮಾನಿ ರಮೇಶ್(೫೫) ಶುಕ್ರವಾರ ನಿಧನ ಹೊಂದಿದ್ದಾರೆ.
ಪತ್ನಿ, ಪುತ್ರ ಹಾಗು ಪುತ್ರಿ ಇದ್ದಾರೆ. ಕಳೆದ ೩ ದಿನಗಳ ಹಿಂದೆ ನ್ಯೂಟೌನ್ ವಿಐಎಸ್ಎಲ್ ಆಸ್ಪತ್ರೆ ರಸ್ತೆಯಲ್ಲಿ ತೀವ್ರ ಅಸ್ವಸ್ಥಗೊಂಡು ಬಿದ್ದಿದ್ದ ಇವರನ್ನು ಬೆಳಗಿನ ಜಾವ ರಸ್ತೆಯಲ್ಲಿ ವಾಯು ವಿಹಾರಕ್ಕೆ ಬರುವವರು ಕಂಡು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ.
ರಮೇಶ್ ಸುರಗಿತೋಪಿನಲ್ಲಿ ಒಬ್ಬರೇ ವಾಸವಿದ್ದು, ಪತ್ನಿ ಮತ್ತು ಮಕ್ಕಳು ದಾವಣಗೆರೆ ವಾಸವಿದ್ದಾರೆ. ಜೆಪಿಎಸ್ ಕಾಲೋನಿ ಮೆಸ್ಕಾಂ ಕಛೇರಿ ಆವರಣದ ಉದ್ಯಾನವನದಲ್ಲಿ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು.
ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿಯವರ ಅಭಿಮಾನಿಯಾಗಿದ್ದ ಇವರ ನಿಧನಕ್ಕೆ ಜೆಡಿಎಸ್ ಯುವ ಮುಖಂಡ ಎಂ.ಎ ಅಜಿತ್, ಸುರಗಿತೋಪು ಶ್ರೀ ಚೌಡೇಶ್ವರಿ ದೇವಸ್ಥಾನ ಟ್ರಸ್ಟ್ ಆಡಳಿತ ಮಂಡಳಿ ಹಾಗು ಸುರಗಿತೋಪು ನಿವಾಸಿಗಳು ಸಂತಾಪ ಸೂಚಿಸಿದ್ದಾರೆ.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ