ಭದ್ರಾವತಿ : ಕೋಟ್ಯಾಂತರ ಹಿಂದುಗಳ ಪವಿತ್ರ ಕ್ಷೇತ್ರ ಶ್ರೀ ಮಂಜುನಾಥಸ್ವಾಮಿ ಪುಣ್ಯ ಸನ್ನಿಧಿಗೆ ಕಳಂಕ ತರಲು ಒಳಸಂಚು ನಡೆಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಿ ನಗರದ ಶ್ರೀ ಕ್ಷೇತ್ರ ಧರ್ಮಸ್ಥಳ ಭಕ್ತ ಬಳಗದ ವತಿಯಿಂದ ಆ.೧೫ರಂದು ಬೆಳಿಗ್ಗೆ ೧೦.೩೦ಕ್ಕೆ ಬೃಹತ್ ಸಹಿ ಸಂಗ್ರಹ ಅಭಿಯಾನ ಹಮ್ಮಿಕೊಳ್ಳಲಾಗಿದೆ.
` ಹಿಂದು ಧಾರ್ಮಿಕ ಶ್ರದ್ಧಾ ಕೇಂದ್ರಗಳ ಮೇಲೆ ನಡೆಯುತ್ತಿರುವ ವ್ಯವಸ್ಥಿತ ಪಿತೂರಿ ನಿಲ್ಲಲಿ! ನಿಲ್ಲಲಿ!' ಎಂಬ ಘೋಷ ವಾಕ್ಯದೊಂದಿಗೆ ನಗರದ ಕೆಎಸ್ಆರ್ಟಿಸಿ ಮುಖ್ಯ ಬಸ್ ನಿಲ್ದಾಣದಲ್ಲಿ ಸಮೀಪ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಲಾಗಿದೆ.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ