ಭದ್ರಾವತಿ ನಗರಸಭೆ ವ್ಯಾಪ್ತಿಯ ಭದ್ರಾ ಕಾಲೋನಿ ಭದ್ರಾ ಪ್ರೌಢ ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ ಹಿನ್ನಲೆಯಲ್ಲಿ ಸಿ.ಎಸ್ ನಾಗರಾಜು ದಂಪತಿ ಸನ್ಮಾನಿಸಿ ಗೌರವಿಸಲಾಯಿತು.
ಭದ್ರಾವತಿ : ನಗರಸಭೆ ವ್ಯಾಪ್ತಿಯ ಭದ್ರಾ ಕಾಲೋನಿ ಭದ್ರಾ ಪ್ರೌಢ ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ ಹಿನ್ನಲೆಯಲ್ಲಿ ಸಿ.ಎಸ್ ನಾಗರಾಜು ದಂಪತಿ ಸನ್ಮಾನಿಸಿ ಗೌರವಿಸಲಾಯಿತು.
ಮುಖ್ಯೋಪಾಧ್ಯಾಯರಾಗಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿರುವ ನಾಗರಾಜು ಅವರನ್ನು ಮೈಸೂರಿನ ಉದ್ಯಮಿ ಕಾಂತರಾಜ್, ವಿ. ರಮೇಶ್, ದೇವೇಂದ್ರಪ್ಪ ಸೇರಿದಂತೆ ಸುಮಾರು ೬೦ ರಿಂದ ೭೦ ಹಳೇಯ ವಿದ್ಯಾರ್ಥಿಗಳು ಹಾಗು ಸ್ಥಳೀಯರು ಶಾಲೆಯ ಆವರಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಿದರು.
ಸನ್ಮಾನಿಸ ಸ್ವೀಕರಿಸಿದ ನಾಗರಾಜುರವರು ತಮ್ಮ ವೃತ್ತಿ ಜೀವನದ ಕೆಲವು ಘಟನೆಗಳನ್ನು ಸ್ಮರಿಸಿ ಕರ್ತವ್ಯದ ಅವಧಿಯಲ್ಲಿ ಸಹಕರಿಸಿದ ಶಿಕ್ಷಕ ವೃಂದ, ಸಿಬ್ಬಂದಿ ವರ್ಗ, ಶಾಲಾ ಆಡಳಿತ ಮಂಡಳಿ, ಸ್ಥಳೀಯ ನಿವಾಸಿಗಳು, ಜನಪ್ರತಿನಿಧಿ ಸೇರಿದಂತೆ ಪ್ರತಿಯೊಬ್ಬರಿಗೂ ಕೃತಜ್ಞತೆ ಸಲ್ಲಿಸಿದರು.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ