ಶುಕ್ರವಾರ, ಆಗಸ್ಟ್ 22, 2025

ಶಿಕ್ಷಣದ ಜೊತೆಗೆ ಗುರು-ಹಿರಿಯರಿಗೆ ಗೌರವ ನೀಡುವ ಉತ್ತಮ ಸಂಸ್ಕಾರ ರೂಢಿಸಿಕೊಳ್ಳಿ : ಬೆಕ್ಕಿನಕಲ್ಮಠ ಶ್ರೀ

ಭದ್ರಾವತಿ ನಗರದ ಜೇಡಿಕಟ್ಟೆ ಮಾತೃಶ್ರೀ ಟ್ರಸ್ಟ್, ಶ್ರೀ ವಿನಾಯಕ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಶ್ರಾವಣ ಚಿಂತನ ಹಾಗು ಅಕ್ಷರಾಭ್ಯಾಸ ಕಾರ್ಯಕ್ರಮದ ದಿವ್ಯ ಸಾನಿಧ್ಯ ಶಿವಮೊಗ್ಗ ಶ್ರೀ ಬೆಕ್ಕಿನಕಲ್ಮಠದ ಶ್ರೀ ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿಯವರುವಹಿಸಿ ಉದ್ಘಾಟಿಸಿದರು. 
    ಭದ್ರಾವತಿ : ನಗರದ ಜೇಡಿಕಟ್ಟೆ ಮಾತೃಶ್ರೀ ಟ್ರಸ್ಟ್, ಶ್ರೀ ವಿನಾಯಕ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಶ್ರಾವಣ ಚಿಂತನ ಹಾಗು ಅಕ್ಷರಾಭ್ಯಾಸ ಕಾರ್ಯಕ್ರಮದ ದಿವ್ಯ ಸಾನಿಧ್ಯ ಶಿವಮೊಗ್ಗ ಶ್ರೀ ಬೆಕ್ಕಿನಕಲ್ಮಠದ ಶ್ರೀ ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿಯವರುವಹಿಸಿ ಆಶೀರ್ವಚನ ನೀಡಿದರು. 
    ಮಕ್ಕಳ ಬೆಳವಣಿಗೆಯಲ್ಲಿ ಶಿಕ್ಷಣದ ಮಹತ್ವ ಹಾಗು ಶಿಕ್ಷಕರ ಪಾತ್ರ ಕುರಿತು ಶ್ರೀಗಳು ಮಾತನಾಡಿ, ಶಿಕ್ಷಣದ ಜೊತೆಗೆ ಗುರು-ಹಿರಿಯರಿಗೆ ಗೌರವ ನೀಡುವುದು ಸೇರಿದಂತೆ ಉತ್ತಮ ಸಂಸ್ಕಾರ ರೂಢಿಸಿಕೊಳ್ಳುವಂತೆ ಕರೆ ನೀಡಿದರು. 
    ವಿದ್ಯಾಸಂಸ್ಥೆ ಅಧ್ಯಕ್ಷ ಡಾ. ಕುಮಾರಸ್ವಾಮಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ನಗರಸಭೆ ಉಪಾಧ್ಯಕ್ಷ ಮಣಿ ಎಎನ್‌ಎಸ್, ವಾಲ್ಮೀಕಿ ಸಮಾಜದ ನಗರ ಅಧ್ಯಕ್ಷ, ನಗರಸಭೆ ಸದಸ್ಯ ಬಸವರಾಜ ಬಿ. ಆನೇಕೊಪ್ಪ, ಜೇಡಿಕಟ್ಟೆ ಶ್ರೀ ಮರುಳ ಸಿದ್ದೇಶ್ವರ ಧಾರ್ಮಿಕ ಜನ ಕಲ್ಯಾಣ ಟ್ರಸ್ಟ್ ಅಧ್ಯಕ್ಷ ಸಿದ್ದಲಿಂಗಯ್ಯ, ಕಾರ್ಯದರ್ಶಿ ಎಸ್. ವಾಗೀಶ್,  ಶ್ರೀ ಮರುಳ ಸಿದ್ದೇಶ್ವರ ದೇವಸ್ಥಾನದ ಅರ್ಚಕ ರುದ್ರೇಶ್, ವಾಲ್ಮೀಕಿ ಸಮಾಜದ ಪದಾಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 
    ವಿದ್ಯಾರ್ಥಿನಿ ಖುಷಿ ಪ್ರಾರ್ಥಿಸಿ, ಸಹ ಶಿಕ್ಷಕಿ ಭಾರ್ಗವಿ ಸ್ವಾಗತಿಸಿದರು. ಸಹ ಶಿಕ್ಷಕಿಯರಾದ ಹೇಮಾವತಿ ಮತ್ತು ರಮ್ಯಾ ಕಾರ್ಯಕ್ರಮ ನಿರೂಪಿಸಿ, ಎಂ. ಕಾವ್ಯ ವಂದಿಸಿದರು. 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ