ಶುಕ್ರವಾರ, ಆಗಸ್ಟ್ 29, 2025

ಜಿ.ಸಿ ಬಾಯ್ಸ್ ಯುವಕರ ಸಂಘದಿಂದ ವಿನಾಯಕ ಮಹೋತ್ಸವ : ಆ.೩೦ರಂದು ಸತ್ಯನಾರಾಯಣ ಪೂಜೆ, ಅನ್ನಸಂತರ್ಪಣೆ

ಭದ್ರಾವತಿ ನಗರಸಭೆ ವ್ಯಾಪ್ತಿಯ ಜನ್ನಾಪುರ ಗಣೇಶ್ ಕಾಲೋನಿ ಜಿ.ಸಿ ಬಾಯ್ಸ್ ಯುವಕರ ಸಂಘದ ವತಿಯಿಂದ ೫೫ನೇ ವರ್ಷದ ವಿನಾಯಕ ಮಹೋತ್ಸವ ಆಚರಿಸಲಾಗುತ್ತಿದ್ದು, ಈ ಬಾರಿ ನವಿಲಿನ ಮೇಲೆ ಕುಳಿತ ಆಕರ್ಷಕ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿದೆ. 
    ಭದ್ರಾವತಿ: ನಗರಸಭೆ ವ್ಯಾಪ್ತಿಯ ಜನ್ನಾಪುರ ಗಣೇಶ್ ಕಾಲೋನಿ ಜಿ.ಸಿ ಬಾಯ್ಸ್ ಯುವಕರ ಸಂಘದ ವತಿಯಿಂದ ೫೫ನೇ ವರ್ಷದ ವಿನಾಯಕ ಮಹೋತ್ಸವ ಆಚರಿಸಲಾಗುತ್ತಿದ್ದು, ಆ.೩೧ರ ಭಾನುವಾರ ಮೂರ್ತಿ ವಿಸರ್ಜನೆ ನಡೆಯಲಿದೆ. 
    ಸ್ಥಳೀಯ ಯುವಕರು ಒಗ್ಗಟ್ಟಾಗಿ ನಿರಂತರವಾಗಿ ವಿನಾಯಕ ಮಹೋತ್ಸವ ಆಚರಿಸಿಕೊಂಡು ಬರುತ್ತಿದ್ದು, ಈ ಬಾರಿ ನವಿಲಿನ ಮೇಲೆ ಕುಳಿತ ಆಕರ್ಷಕ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿದೆ. 
    ಆ.೩೦ರ ಶನಿವಾರ ಬೆಳಿಗ್ಗೆ ಸತ್ಯನಾರಾಯಣ ಪೂಜೆ ಮತ್ತು ಮಧ್ಯಾಹ್ನ ೧೨ ಗಂಟೆಗೆ ಅನ್ನಸಂತರ್ಪಣೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ೩೧ರ ಭಾನುವಾರ ವಿವಿಧ ಕಲಾತಂಡಗಳೊಂದಿಗೆ ಉತ್ಸವ ಮೆರವಣಿಗೆ ಮೂಲಕ ವಿನಾಯಕ ಮೂರ್ತಿ ವಿಸರ್ಜನೆ ನಡೆಯಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಲಾಗಿದೆ.  

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ