ಭದ್ರಾವತಿ : ನಗರದ ಸೋನಿ ಗಾಯನ ಕಲಾ ವೃಂದ ೨ನೇ ವರ್ಷದ ವಾರ್ಷಿಕೋತ್ಸವ ಹಾಗು ಸೋನಿ ರಾಜ್ಯ ಪ್ರಶಸ್ತಿ, ಪ್ರತಿಭಾ ಪುರಸ್ಕಾರ ಸಮಾರಂಭ ಆ.೧೪ರಂದು ಗುರುವಾರ ಮಧ್ಯಾಹ್ನ ೧೨.೧೫ಕ್ಕೆ ನ್ಯೂಟೌನ್ ವೇನ್ಸ್ ಹಾಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಸೋನಿ ಗಾಯನ ಕಲಾ ವೃಂದ ಅಧ್ಯಕ್ಷ ಆರ್. ಸೋನಿ ಹರೀಶ್ ಅಧ್ಯಕ್ಷತೆ ವಹಿಸಲಿದ್ದು, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಅಪೇಕ್ಷ ಮಂಜುನಾಥ್ ಸಮಾರಂಭ ಉದ್ಘಾಟಿಸಲಿದ್ದಾರೆ. ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಸ್ತ್ರೀ ರೋಗ ತಜ್ಞೆ ಡಾ. ವರ್ಷ, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ನ್ಯಾಯವಾದಿ ಎ. ನಾರಾಯಣ ಸ್ವಾಮಿ ಮತ್ತು ಸೌಂದರ್ಯ ವಧನ ತರಬೇತಿದಾರರಾದ ಜಿ. ಸುಮಾ ಅವರಿಗೆ ಸೋನಿ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಲಾಗಿದೆ.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ