ಭಾನುವಾರ, ಆಗಸ್ಟ್ 31, 2025

ದೇವಸ್ಥಾನ ನಿರ್ಮಾಣದ ಜೊತೆಗೆ ವಿನಾಯಕ ಮಹೋತ್ಸವ : ೧೭ನೇ ವರ್ಷದ ಮೂರ್ತಿ ವಿಸರ್ಜನೆ

ಭದ್ರಾವತಿ ನಗರಸಭೆ ವಾರ್ಡ್ ನಂ.೯ ಮತ್ತು ೧೦ರ ವ್ಯಾಪ್ತಿಯ ತಾಲೂಕು ಶ್ರೀ ವೈಷ್ಣವ ಸಂಸ್ಥಾಪಕರು ದೇವಸ್ಥಾನ, ಶ್ರೀ ಮಹಾವಿಷ್ಣು ಮೃತ್ಯುಂಜಯ ಮತ್ತು ಅಭಯ ಹಸ್ತ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನ ಸೇವಾ ಟ್ರಸ್ಟ್ ವತಿಯಿಂದ ಕಳೆದ ಸುಮಾರು ೧೭ ವರ್ಷಗಳಿಂದ ವಿನಾಯಕ ಮಹೋತ್ಸವ ಆಚರಿಸಿಕೊಂಡು ಬರಲಾಗುತ್ತಿದ್ದು, ಭಾನುವಾರ ಸಂಜೆ ಮೂರ್ತಿ ವಿಸರ್ಜನೆ ನಡೆಸಲಾಯಿತು.   
    ಭದ್ರಾವತಿ: ನಗರಸಭೆ ವಾರ್ಡ್ ನಂ.೯ ಮತ್ತು ೧೦ರ ವ್ಯಾಪ್ತಿಯ ವಿಜಯನಗರದ ತಾಲೂಕು ಶ್ರೀ ವೈಷ್ಣವ ಸಂಸ್ಥಾಪಕರು ದೇವಸ್ಥಾನ, ಶ್ರೀ ಮಹಾವಿಷ್ಣು ಮೃತ್ಯುಂಜಯ ಮತ್ತು ಅಭಯ ಹಸ್ತ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನ ಸೇವಾ ಟ್ರಸ್ಟ್ ವತಿಯಿಂದ ಕಳೆದ ಸುಮಾರು ೧೭ ವರ್ಷಗಳಿಂದ ವಿನಾಯಕ ಮಹೋತ್ಸವ ಆಚರಿಸಿಕೊಂಡು ಬರಲಾಗುತ್ತಿದ್ದು, ಭಾನುವಾರ ಸಂಜೆ ಮೂರ್ತಿ ವಿಸರ್ಜನೆ ನಡೆಸಲಾಯಿತು. 
    ದೇವಸ್ಥಾನದ ಪ್ರಧಾನ ಅರ್ಚಕರಾದ ನಗರದ ವಿಐಎಸ್‌ಎಲ್ ಕಾರ್ಖಾನೆ ನಿವೃತ್ತ ನೌಕರ ಎನ್. ಗೋವಿಂದರಾಜುರವರು ತಮ್ಮ ಸ್ವಂತ ಜಾಗದಲ್ಲಿ ಕಳೆದ ಸುಮಾರು ೧೩ ವರ್ಷಗಳಿಂದ ಹಂತ ಹಂತವಾಗಿ ದೇವಸ್ಥಾನ ನಿರ್ಮಿಸುತ್ತಿದ್ದು, ಟ್ರಸ್ಟ್ ರಚಿಸಿಕೊಂಡು ಜಾಗ ಹಸ್ತಾಂತರಿಸುವ ಜೊತೆಗೆ ತಮ್ಮದೇ ಸುಮಾರು ೧೦ ಲಕ್ಷಕ್ಕೂ ಹೆಚ್ಚಿನ ಹಣ ದೇವಸ್ಥಾನದ ನಿರ್ಮಾಣ ಕಾರ್ಯಕ್ಕೆ ವ್ಯಯ ಮಾಡಿದ್ದಾರೆ. ಈ ನಡುವೆ ಜನಪ್ರತಿನಿಧಿ, ಸ್ಥಳೀಯ ಸಂಸ್ಥೆಗಳು ಹಾಗು ದಾನಿಗಳಿಂದ ಸಹಾಯ ಹಸ್ತ ನಿರೀಕ್ಷಿಸುತ್ತಿದ್ದಾರೆ. ಈ ಅವರ ನಿರೀಕ್ಷೆಗೆ ತಕ್ಕಂತೆ ನೆರವು ಬಂದಲ್ಲಿ ಶೀಘ್ರದಲ್ಲಿಯೇ ದೇವಸ್ಥಾನ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದೆ. 
    ಈ ನಡುವೆ ವಿನಾಯಕ ಮಹೋತ್ಸವ, ಶ್ರೀ ರಾಮ ನವಮಿ, ವೈಕುಂಠ ಏಕಾದಶಿ ಸೇರಿದಂತೆ ಇನ್ನಿತರ ಹಬ್ಬ, ಉತ್ಸವಗಳನ್ನು ಸಹ ಅದ್ದೂರಿಯಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ಈ ಬಾರಿ ವಿನಾಯಕ ಮೋಹತ್ಸವ ಅದ್ದೂರಿಯಾಗಿ ನಡೆಸುವ ಮೂಲಕ ಹೊಸಮನೆ ಅಶ್ವತ್ಥನಗರ ಭೂತಪ್ಪ ದೇವಸ್ಥಾನದ ಬಳಿ ಗೊಂದಿ ಕಾಲುವೆಯಲ್ಲಿ ಮೂರ್ತಿ ವಿಸರ್ಜನೆಯೊಂದಿಗೆ ಮುಕ್ತಾಯಗೊಳಿಸಲಾಗಿದೆ. 
    ಟ್ರಸ್ಟ್ ಅಧ್ಯಕ್ಷರಾದ ಪ್ರಧಾನ ಅರ್ಚಕ ಎನ್. ಗೋವಿಂದರಾಜು, ವ್ಯವಸ್ಥಾಪಕಿ ಡಿ. ಮಂಜುಳ ಗೋವಿಂದರಾಜು, ಪತ್ರಿಕಾ ವಿತರಕ ಕೃಷ್ಣಮೂರ್ತಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ