ಶನಿವಾರ, ಆಗಸ್ಟ್ 9, 2025

ಮೈಸೂರು ಸಂಸ್ಥಾನ ಒಕ್ಕೂಟ ವ್ಯವಸ್ಥೆಗೆ ಸೇರ್ಪಡೆಗೊಂಡ ದಿನ ಆಚರಣೆ

ಕನ್ನಡ ಧ್ವಜ ಹಿಡಿದು ಕನ್ನಡಾಭಿಮಾನ ಬೆಳೆಸಿಕೊಳ್ಳಲು ಕರೆ 

ಮೈಸೂರು ಸಂಸ್ಥಾನ ದೇಶದ ಒಕ್ಕೂಟ ವ್ಯವಸ್ಥೆಯಲ್ಲಿ ವಿಲೀನಗೊಂಡ ದಿನವನ್ನು ಭದ್ರಾವತಿ ನಗರದಲ್ಲಿ ವಿಶಿಷ್ಟವಾಗಿ ಕನ್ನಡ ಬಾವುಟ ಹಿಡಿದು ಪ್ರತಿಯೊಬ್ಬರ ಮನೆಗಳಲ್ಲಿ ಕನ್ನಡದ ಧ್ವಜ ಹಾರಾಡಲಿ ಎಂಬ ಭಾವನೆಯೊಂದಿಗೆ ಆಚರಿಸಲಾಯಿತು
    ಭದ್ರಾವತಿ : ಮೈಸೂರು ಸಂಸ್ಥಾನ ದೇಶದ ಒಕ್ಕೂಟ ವ್ಯವಸ್ಥೆಯಲ್ಲಿ ವಿಲೀನಗೊಂಡ ದಿನವನ್ನು ನಗರದಲ್ಲಿ ವಿಶಿಷ್ಟವಾಗಿ ಕನ್ನಡ ಬಾವುಟ ಹಿಡಿದು ಪ್ರತಿಯೊಬ್ಬರ ಮನೆಗಳಲ್ಲಿ ಕನ್ನಡದ ಧ್ವಜ ಹಾರಾಡಲಿ ಎಂಬ ಭಾವನೆಯೊಂದಿಗೆ ಆಚರಿಸಲಾಯಿತು
    ಆ.೯, ೧೯೪೭ರಂದು ಮೈಸೂರು ಸಂಸ್ಥಾನ ದೇಶದ ಒಕ್ಕೂಟ ವ್ಯವಸ್ಥೆಗೆ ಸೇರ್ಪಡೆಗೊಂಡ ದಿನ. ಅಂದಿನ ಮೈಸೂರು ಸಂಸ್ಥಾನದ ಮಹಾರಾಜರಾದ ಶ್ರೀ ಜಯಚಾಮರಾಜೇಂದ್ರ ಒಡೆಯರ್‌ರವರು ಒಕ್ಕೂಟ ವ್ಯವಸ್ಥೆಗೆ ಸಹಿ ಮಾಡಿದ ದಿನ ಇದಾಗಿದ್ದು, ಮಹಾರಾಜರ ತ್ಯಾಗ ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಪ್ರತಿಯೊಬ್ಬರು ಕನ್ನಡ ನಾಡಿನ ಮೇಲೆ ಅಭಿಮಾನ ಬೆಳೆಸಿಕೊಳ್ಳಬೇಕು. ನೆಲ, ಜಲ, ಭಾಷೆ, ಸಂಸ್ಕೃತಿ ಪ್ರೀತಿಸಿ ಗೌರವಿಸುವ ನಿಟ್ಟಿನಲ್ಲಿ ಈ ದಿನವನ್ನು ಆಚರಿಸಬೇಕೆಂದು ಮನವಿ ಮಾಡಲಾಯಿತು. 
    ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಪಕ್ಷದ ತಾಲೂಕು ಅಧ್ಯಕ್ಷ ತೀರ್ಥೇಶ್,. ಡಿಎಸ್‌ಎಸ್ ಮುಖಂಡರಾದ ದಾಸರಕಲ್ಲಳ್ಳಿ ನಾಗರಾಜ್, ವೀರಾಪುರ ಗಣೇಶ್, ಕರ್ನಾಟಕ ರಕ್ಷಣಾ ವೇದಿಕೆ ಮುಖಂಡ ಮೊಹಮ್ಮದ್ ಸಲ್ಮಾನ್, ಹಸಿರು ಸೇನೆ ಯುವ ಘಟಕದ ತಾಲೂಕು ಅಧ್ಯಕ್ಷ ಇಮ್ರಾನ್, ಶ್ರೀ ತಿರುಮಲ ಚಾರಿಟಬಲ್ ಫೌಂಡೇಷನ್ ಪ್ರಶಾಂತ್, ಜಾನು, ನಿತಿನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ