ಶನಿವಾರ, ಆಗಸ್ಟ್ 23, 2025

ಅಥರ್ವ ಶಾಲೆಯಲ್ಲಿ ವೈಭವಯುತ ಶ್ರೀ ಕೃಷ್ಣ ಜನ್ಮಾಷ್ಟಮಿ : ಶ್ರೀ ಕೃಷ್ಣ-ರಾಧೆ ವೇಷದಲ್ಲಿ ಕಣ್ಮನ ಸೆಳೆದ ಮಕ್ಕಳು

ಭದ್ರಾವತಿ ನಗರದ ಹುತ್ತಾ ಕಾಲೋನಿ ಅಥರ್ವ ಕಿಡ್ಸ್ ಶಾಲೆಯಲ್ಲಿ ಶನಿವಾರ ೨ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ವಿಜೃಂಭಣೆಯಿಂದ ಆಚರಿಸಲಾಯಿತು. ಮಕ್ಕಳು ಶ್ರೀ ಕೃಷ್ಣ-ರಾಧೆ ವೇಷದಲ್ಲಿ ಕಂಗೊಳಿಸಿದರು. 
    ಭದ್ರಾವತಿ : ನಗರದ ಹುತ್ತಾ ಕಾಲೋನಿ ಅಥರ್ವ ಕಿಡ್ಸ್ ಶಾಲೆಯಲ್ಲಿ ಶನಿವಾರ ೨ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ವಿಜೃಂಭಣೆಯಿಂದ ಆಚರಿಸಲಾಯಿತು. ಮಕ್ಕಳು ಶ್ರೀ ಕೃಷ್ಣ-ರಾಧೆ ವೇಷದಲ್ಲಿ ಕಂಗೊಳಿಸಿದರು. 


    ಶ್ರೀ ಕೃಷ್ಣ-ರಾಧೆ ವೇಷದೊಂದಿಗೆ ವೇದಿಕೆ ಮೇಲೆ ಪ್ರದರ್ಶನ ನೀಡಿದ ಮಕ್ಕಳು ತಮ್ಮದೇ ಆದ ಹಾವ-ಭಾವ ಭಂಗಿಗಳಿಂದ, ಮಾತುಗಳಿಂದ ಎಲ್ಲರನ್ನು ರಂಜಿಸುವ ಮೂಲಕ ಕಣ್ಮನ ಸೆಳೆದರು. ಕಾರ್ಯಕ್ರಮಕ್ಕೆ ಪೂರಕವಾಗಿ ವೈಭವಯುತವಾದ ವೇದಿಕೆಯನ್ನು ಸಹ ಸಿದ್ದಪಡಿಸಲಾಗಿತ್ತು. 

ಭದ್ರಾವತಿ ನಗರದ ಹುತ್ತಾ ಕಾಲೋನಿ ಅಥರ್ವ ಕಿಡ್ಸ್ ಶಾಲೆಯಲ್ಲಿ ಶನಿವಾರ ೨ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ವಿಜೃಂಭಣೆಯಿಂದ ಆಚರಿಸಲಾಯಿತು. ಮಕ್ಕಳು ಬಣ್ಣದ ಮಡಿಕೆ ಒಡೆದು ಸಂಭ್ರಮಿಸಿದರು.
    ಈ ನಡುವೆ ಶಾಲೆ ಒಳ ಭಾಗದಲ್ಲಿ ಶ್ರೀ ಕೃಷ್ಣ-ರಾಧೆ ಇಬ್ಬರೂ ನಿಧಿವನದಲ್ಲಿ ವಿಹಾರಗೊಂಡಿರುವಂತೆ ಅದ್ಭುತವಾಗಿ ಅಲಂಕರಿಸಲಾಗಿತ್ತು. ಮಕ್ಕಳು, ಪೋಷಕರು ಕಣ್ತುಂಬಿಕೊಂಡರು. ಮತ್ತೊಂದೆಡೆ ಶಾಲಾ ಆವರಣದಲ್ಲಿ ಅಲಂಕೃತಗೊಂಡ ಜೋಕಾಲಿಯಲ್ಲಿ ಮಕ್ಕಳು ಕುಳಿತು ಆಟವಾಡಿ ಇನ್ನೊಂದೆಡೆ ಬಣ್ಣದ ಮಡಿಕೆ ಒಡೆದು ಸಂಭ್ರಮಿಸಿದರು. ಶ್ರೀಕೃಷ್ಣ-ರಾಧೆ ವೇಷ ಧರಿಸಿದ್ದ ತಮ್ಮ ಮಕ್ಕಳ ಹಾವ-ಭಾವ ಭಂಗಿಗಳನ್ನು ಪೋಷಕರು ತಮ್ಮ ಮೊಬೈಲ್‌ಗಳಲ್ಲಿ ಸೆರೆ ಹಿಡಿದು ಆನಂದಿಸಿದರು. 


ಭದ್ರಾವತಿ ನಗರದ ಹುತ್ತಾ ಕಾಲೋನಿ ಅಥರ್ವ ಕಿಡ್ಸ್ ಶಾಲೆಯಲ್ಲಿ ಶನಿವಾರ ೨ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ವಿಜೃಂಭಣೆಯಿಂದ ಆಚರಿಸಲಾಯಿತು. ಅಲಂಕೃತಗೊಂಡ ಜೋಕಾಲಿಯಲ್ಲಿ ಮಕ್ಕಳು ಕುಳಿತು ಆಟವಾಡಿ ಸಂಭ್ರಮಿಸಿದರು. 
    ಅಕ್ಕನ ಬಳಗದ ಕಾರ್ಯದರ್ಶಿ ಸುಧಾಮಣಿ ಮತ್ತು  ಶಿವಮೊಗ್ಗ ಪತಾಂಜಲಿ ನಾಗರಾಜ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮೆಚ್ಚುಗೆ ವ್ಯಕ್ತಪಡಿಸುವ ಮೂಲಕ ಮಕ್ಕಳನ್ನು ಅಭಿನಂದಿಸಿದರು. ಶಾಲೆಯ ಮುಖ್ಯೋಪಾಧ್ಯಾಯಿನಿ ಬಿ.ಎಚ್ ಲಾವಣ್ಯ, ನಿರ್ವಾಹಕ ಶಿವಕುಮಾರ್ ಸೇರಿದಂತೆ ಶಾಲೆಯ ಶಿಕ್ಷಕಿಯರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪ್ರತಿಯೊಬ್ಬರಿಗೂ ಲಾಡು ವಿತರಿಸಲಾಯಿತು. 



ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ