ಸೋಮವಾರ, ಸೆಪ್ಟೆಂಬರ್ 1, 2025

ಧರ್ಮಸ್ಥಳ ಸತ್ಯಯಾತ್ರೆಯಲ್ಲಿ ಉಕ್ಕಿನ ನಗರದ ಜೆಡಿಎಸ್ ಮುಖಂಡರು ಭಾಗಿ

ಧರ್ಮಸ್ಥಳ ಗ್ರಾಮದಲ್ಲಿ ಕೊಲೆ ಹಾಗು ಅತ್ಯಾಚಾರಕ್ಕೆ ಒಳಗಾದ ನೂರಾರು ಶವ ಹೂಳಲಾಗಿದೆ ಎಂಬ ದೂರಿನ ನೆಪದಲ್ಲಿ ಕ್ಷೇತ್ರದ ಅಪಪ್ರಚಾರ ನಡೆದಿದೆ ಎಂದು ಆರೋಪಿಸಿ ಜಾತ್ಯಾತೀತ ಜನತಾ ದಳ ವತಿಯಿಂದ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಸತ್ಯಯಾತ್ರೆಯಲ್ಲಿ ಭದ್ರಾವತಿ ವಿಧಾನಸಭಾ ಕ್ಷೇತ್ರದ ಪಕ್ಷದ ಪ್ರಮುಖರು ಪಾಲ್ಗೊಂಡಿದ್ದರು. 
    ಭದ್ರಾವತಿ : ಧರ್ಮಸ್ಥಳ ಗ್ರಾಮದಲ್ಲಿ ಕೊಲೆ ಹಾಗು ಅತ್ಯಾಚಾರಕ್ಕೆ ಒಳಗಾದ ನೂರಾರು ಶವ ಹೂಳಲಾಗಿದೆ ಎಂಬ ದೂರಿನ ನೆಪದಲ್ಲಿ ಕ್ಷೇತ್ರದ ಅಪಪ್ರಚಾರ ನಡೆದಿದೆ ಎಂದು ಆರೋಪಿಸಿ ಜಾತ್ಯಾತೀತ ಜನತಾ ದಳ ವತಿಯಿಂದ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಸತ್ಯಯಾತ್ರೆಯಲ್ಲಿ ವಿಧಾನಸಭಾ ಕ್ಷೇತ್ರದ ಪಕ್ಷದ ಪ್ರಮುಖರು ಪಾಲ್ಗೊಂಡಿದ್ದರು. 
    ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಪಾಲ್ಗೊಂಡಿದ್ದ ಪಕ್ಷದ ಸ್ಥಳೀಯ ಮುಖಂಡರಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದ ಅಪ್ಪಾಜಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ, ಪಕ್ಷದ ನಗರ ಘಟಕದ ಅಧ್ಯಕ್ಷ ಆರ್. ಕುರುಣಾಮೂರ್ತಿ, ನ್ಯಾಯವಾದಿ ಟಿ. ಚಂದ್ರೇಗೌಡ, ನಗರಸಭೆ ಮಾಜಿ ಅಧ್ಯಕ್ಷೆ ವಿಶಾಲಾಕ್ಷಿ, ಶಿಮುಲ್ ಮಾಜಿ ಅಧ್ಯಕ್ಷ ಡಿ. ಆನಂದ, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಧರ್ಮೇಗೌಡ, ಭಾಗ್ಯಮ್ಮ, ಗ್ರಾಮ ಪಂಚಾಯಿತಿ, ನಗರಸಭೆ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಪಕ್ಷದ ಜನಪ್ರತಿನಿಧಿಗಳು, ಇನ್ನಿತರರು ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದು ನಂತರ ಶ್ರೀ ಕ್ಷೇತ್ರದ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯ ಡಾ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಸತ್ಯಯಾತ್ರೆ ಕುರಿತು ವಿವರಿಸಿದರು. 
 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ