ಸಿಹಿ ಹಂಚಿಕೆ ಮೂಲಕ ಪಟಾಕಿ ಸಿಡಿಸಿ ಬಿಜೆಪಿ ಮಂಡಲದಿಂದ ಸಂಭ್ರಮಾಚರಣೆ
ಕೇಂದ್ರ ಸರ್ಕಾರ ಜಿ.ಎಸ್.ಟಿ ದರಗಳಲ್ಲಿ ಭಾರಿ ಕಡಿತ ಹಾಗೂ ಸುಧಾರಣೆ ಜಾರಿಗೆ ತಂದಿರುವ ಹಿನ್ನೆಲೆಯಲ್ಲಿ ಭದ್ರಾವತಿಯಲ್ಲಿ ಬಿಜೆಪಿ ನಗರ ಹಾಗೂ ಗ್ರಾಮಾಂತರ ಮಂಡಲ ವತಿಯಿಂದ ನಗರದ ರಂಗಪವೃತ್ತದಲ್ಲಿ ಸಾರ್ವಜನಿಕರಿಗೆ ಸಿಹಿ ಹಂಚುವ ಮೂಲಕ ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಲಾಯಿತು.
ಭದ್ರಾವತಿ : ಕೇಂದ್ರ ಸರ್ಕಾರ ಜಿ.ಎಸ್.ಟಿ ದರಗಳಲ್ಲಿ ಭಾರಿ ಕಡಿತ ಹಾಗೂ ಸುಧಾರಣೆ ಜಾರಿಗೆ ತಂದಿರುವ ಹಿನ್ನೆಲೆಯಲ್ಲಿ ಬಿಜೆಪಿ ನಗರ ಹಾಗೂ ಗ್ರಾಮಾಂತರ ಮಂಡಲ ವತಿಯಿಂದ ನಗರದ ರಂಗಪವೃತ್ತದಲ್ಲಿ ಸಾರ್ವಜನಿಕರಿಗೆ ಸಿಹಿ ಹಂಚುವ ಮೂಲಕ ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಲಾಯಿತು.
ನಗರ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನೀಡಿರುವ ಭಾರಿ ಆದಾಯ ತೆರಿಗೆ ವಿನಾಯಿತಿಯಿಂದ ದಿನಬಳಕೆಯ ಹಲವಾರು ವಸ್ತುಗಳ ಬೆಲೆಗಳು ಕಡಿಮೆಯಾಗಲಿದ್ದು, ಆಹಾರ ಪದಾರ್ಥಗಳು, ಔಷಧಿಗಳು, ಸೋಪು, ಬ್ರಷ್, ಪೇಸ್ಟ್, ಆರೋಗ್ಯ ಮತ್ತು ಜೀವವಿಮೆ ಸೌಲಭ್ಯ ಸೇರಿದಂತೆ ಅನೇಕ ಸರಕು ಮತ್ತು ಸೇವೆಗಳು ತೆರಿಗೆ ಮುಕ್ತ ಅಥವಾ ಕೇವಲ ಶೇ.೫ರಷ್ಟು ತೆರಿಗೆಯನ್ನು ಪಾವತಿಸಬೇಕಾಗುತ್ತದೆ. ಇದು ಪ್ರಧಾನಿ ನರೇಂದ್ರ ಮೋದಿಯವರು ನೀಡಿರುವ ದಸರಾ ಹಬ್ಬದ ಕೊಡುಗೆಯಾಗಿದ್ದು, ಹಬ್ಬದ ದಿನದಿಂದಲೇ ಜಾರಿಗೆ ಬಂದಿರುತ್ತದೆ ಎಂದರು.
ಭಾರಿ ಕಡಿತ ಹಾಗೂ ಸುಧಾರಣೆ ಜಾರಿಗೆ ತಂದಿರುವುದು ವ್ಯಾಪಾರಿಗಳು, ಉದ್ದಿಮೆದಾರರು, ವೃತ್ತಿಪರರು, ಮುಖ್ಯವಾಗಿ ಬಡ ಹಾಗು ಮಧ್ಯಮ ವರ್ಗದವರು ಸೇರಿದಂತೆ ಎಲ್ಲಾ ವರ್ಗದ ಜನರಿಗೂ ಅನುಕೂಲವಾಗಲಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಹಾಗು ಕೇಂದ್ರ ಬಿಜೆಪಿ ಸರ್ಕಾರಕ್ಕೆ ಧನ್ಯವಾದ ಸಲ್ಲಿಸುತ್ತೇನೆ ಎಂದರು.
ಪ್ರಮುಖರಾದ ಮಂಗೋಟೆ ರುದ್ರೇಶ್, ಎಂ.ಎಸ್ ಸುರೇಶಪ್ಪ, ಚನ್ನೇಶ್, ರಘುರಾವ್, ಮೊಸರಳ್ಳಿ ಅಣ್ಣಪ್ಪ, ಹನುಮಂತನಾಯ್ಕ, ಪ್ರಸನ್ನ ಕುಮಾರ್, ಜಿ.ವಿ ಕುಮಾರ್, ರವಿಕುಮಾರ್, ಅಶೋಕ್ ರಾವ್, ರಾಜಶೇಖರ್ ಉಪ್ಪಾರ್, ಧನುಷ್ ಬೋಸ್ಲೆ, ಶ್ರೀನಾಥ್ ಆಚಾರ್, ಬಿ.ಆರ್ ಸಚ್ಚಿದಾನಂದ, ಈಶ್ವರ್, ದಿವ್ಯ ಆದರ್ಶ್, ಪ್ರದೀಪ್ ಗೌಡರ್, ಆರ್. ದೀಪಕ್, ರುದ್ರೇಶ್ ಜಾವಳ್ಳಿ, ನಂಜಪ್ಪ, ಪ್ರೇಮ್, ಹರೀಶ್ ಕುಮಾರ್, ನಂದೀಶ್, ಸುಲೋಚನಾ ಪ್ರಕಾಶ್, ಲೋಲಾಕ್ಷಿ ರಾಜ್ಗುರು, ಆಶಾ ಪುಟ್ಟಸ್ವಾಮಿ, ಜಯಲಕ್ಷ್ಮಿ, ಕವಿತಾರಾವ್ ಸೇರಿದಂತೆ ಪಕ್ಷದ ವಿವಿಧ ಮೋರ್ಚಾಗಳ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕರ್ತರು ಪಾಲ್ಗೊಂಡಿದ್ದರು.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ