ಭಾನುವಾರ, ಸೆಪ್ಟೆಂಬರ್ 7, 2025

ವೇಲಾಂಗಣಿ ಆರೋಗ್ಯ ಮಾತೆಯ ಭವ್ಯ ತೇರಿನ ಮೆರವಣಿಗೆ

ಭದ್ರಾವತಿ ಹಳೇನಗರ ವ್ಯಾಪ್ತಿಯ ಗಾಂಧಿನಗರದ ವೇಲಾಂಗಣಿ ಆರೋಗ್ಯ ಮಾತೆ ದೇವಾಲಯದ ಜಾತ್ರಾ ಮಹೋತ್ಸವದ ಅಂಗವಾಗಿ ಭಾನುವಾರ ಅಲಂಕೃತ ಭವ್ಯ ತೇರಿನ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ನಡೆಯಿತು. 
    ಭದ್ರಾವತಿ: ಹಳೇನಗರ ವ್ಯಾಪ್ತಿಯ ಗಾಂಧಿನಗರದ ವೇಲಾಂಗಣಿ ಆರೋಗ್ಯ ಮಾತೆ ದೇವಾಲಯದ ಜಾತ್ರಾ ಮಹೋತ್ಸವದ ಅಂಗವಾಗಿ ಭಾನುವಾರ ಅಲಂಕೃತ ಭವ್ಯ ತೇರಿನ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ನಡೆಯಿತು. 
    ಕಾಗದನಗರ ಸಂತ ಕಾರ್ಮಿಕರ ದೇವಾಲಯದ ಧರ್ಮಗುರು ಫಾದರ್ ಡೊಮಿನಿಕ್ ಕ್ರಿಸ್ತರಾಜ್ ತೇರಿನ ಮೆರವಣಿಗೆಗೆ ಚಾಲನೆ ನೀಡಿದರು. ಗಾಂಧಿನಗರ, ಸಂತೆ ಮೈದಾನ ರಸ್ತೆ, ರಂಗಪ್ಪ ವೃತ್ತ, ಮಾಧವಚಾರ್ ವೃತ್ತ, ತರೀಕೆರೆ ರಸ್ತೆ, ಗಾಂಧಿವೃತ್ತ ಮಾರ್ಗವಾಗಿ ದೇವಾಲಯಕ್ಕೆ ಹಿಂದಿರುಗಲಾಯಿತು. ಭಕ್ತರು ಮೇಣದಬತ್ತಿಗಳನ್ನು ಹಿಡಿದು ಪ್ರಾರ್ಥಿಸುತ್ತಾ ಮೆರವಣಿಗೆಯಲ್ಲಿ ಸಾಗಿಸಿದರು.
    ವೇಲಾಂಗಣಿ ಆರೋಗ್ಯ ಮಾತೆ ದೇವಾಲಯದ ಧರ್ಮಗುರು ಫಾದರ್ ಸ್ಟೀವನ್ ಡೇಸಾ, ಧರ್ಮಭಗಿನಿಯರು, ಭಕ್ತಾಧಿಗಳು ಪಾಲ್ಗೊಂಡಿದ್ದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ