ಗುರುವಾರ, ಸೆಪ್ಟೆಂಬರ್ 11, 2025

ಶಾಲಾ ನಿವೇಶನ ಭೂ ಪರಿವರ್ತನೆ, ಕಟ್ಟಡ ತೆರಿಗೆ ವಿನಾಯಿತಿ ಕೋರಿ ಶಾಸಕರಿಗೆ ಮನವಿ

ಖಾಸಗಿ ಅನುದಾನಿತ/ಅನುದಾನ ರಹಿತ ಶಾಲಾ ಕಾಲೇಜುಗಳ ನಿವೇಶನ ಭೂ ಪರಿವರ್ತನೆಗೆ ಅವಕಾಶ ಮತ್ತು ಶಾಲಾ ನಿವೇಶನ ಹಾಗೂ ಕಟ್ಟಡಗಳ ತೆರಿಗೆ ವಿನಾಯಿತಿ ಮತ್ತಿತರೆ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಒತ್ತಾಯಿಸಿ ಭದ್ರಾವತಿ ತಾಲೂಕು ಖಾಸಗಿ ಅನುದಾನ ರಹಿತ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟದ ಪದಾಧಿಕಾರಿಗಳು  ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಮನವಿ ಸಲ್ಲಿಸಿದರು. 
    ಭದ್ರಾವತಿ : ಖಾಸಗಿ ಅನುದಾನಿತ/ಅನುದಾನ ರಹಿತ ಶಾಲಾ ಕಾಲೇಜುಗಳ ನಿವೇಶನ ಭೂ ಪರಿವರ್ತನೆಗೆ ಅವಕಾಶ ಮತ್ತು ಶಾಲಾ ನಿವೇಶನ ಹಾಗೂ ಕಟ್ಟಡಗಳ ತೆರಿಗೆ ವಿನಾಯಿತಿ ಮತ್ತಿತರೆ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಒತ್ತಾಯಿಸಿ ತಾಲೂಕು ಖಾಸಗಿ ಅನುದಾನ ರಹಿತ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟದ ಪದಾಧಿಕಾರಿಗಳು  ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಮನವಿ ಸಲ್ಲಿಸಿದರು. 
    ಒಕ್ಕೂಟದ ಅಧ್ಯಕ್ಷ ಡಿ. ಪ್ರಭಾಕರ ಬೀರಯ್ಯ ನೇತೃತ್ವದಲ್ಲಿ ಶಾಸಕರನ್ನು ಭೇಟಿ ಮಾಡಿದ ಪದಾಧಿಕಾರಿಗಳು, ಲಕ್ಷಾಂತರ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಯಶಸ್ಸು ಸಾಧಿಸಿ, ಅತ್ಯುತ್ತಮ ಫಲಿತಾಂಶ ನೀಡುವಲ್ಲಿ ಮುಂದಾಗಿರುವ ಖಾಸಗಿ ಶಾಲಾ-ಕಾಲೇಜುಗಳ ಸೇವೆ ಅನನ್ಯವಾಗಿದೆ.  ಸರ್ಕಾರ ಶಾಲಾ ಅಭಿವೃದ್ದಿಗೆ ಸಹಕರಿಸುವ ಬದಲು ಶಿಕ್ಷಣ ಇಲಾಖೆ ಮೂಲಕ ಹೊಸ ಹೊಸ ಕಾನೂನುಗಳ ಸುತ್ತೋಲೆಗಳನ್ನು ಹೊರಡಿಸುವ ಮೂಲಕ ವಿದ್ಯಾಸಂಸ್ಥೆಗಳ ಆಡಳಿತ ಮಂಡಳಿಗಳ ಕಿರಿಕಿರಿಗೆ ಕಾರಣವಾಗಿದೆ. ಇದರಿಂದ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಮಾನಸಿಕವಾಗಿ ಅಡ್ಡಿಯಾಗುತ್ತಿದೆ ಎಂದು ಆರೋಪಿಸಿದರು. 
  ನಗರ ಮತ್ತು ಗ್ರಾಮಾಂತರ ಸೇರಿದಂತೆ ಎಲ್ಲಾ ವಿದ್ಯಾಸಂಸ್ಥೆಗಳಿಗೂ ಒಂದೇ ಮಾದರಿಯಲ್ಲಿ ತೆರಿಗೆ ವಿನಾಯಿತಿ ನೀಡಬೇಕು. ಸಕ್ಷಮ ಪ್ರಾಧಿಕಾರದಿಂದ ಖಾತೆ ಅಥವಾ ಕಟ್ಟಡ ನಕ್ಷೆ ಅನುಮೋದನೆ, ಪರಿಗಣನೆ, ಶಾಲಾ ನಿವೇಶನಗಳ ಭೂ ಪರಿವರ್ತನೆಗೆ ಅವಕಾಶ ನೀಡಬೇಕು. ಅಗ್ನಿ ಸುರಕ್ಷತೆ ಮತ್ತು ಕಟ್ಟಡ ದಕ್ಷತೆ ಹೆಸರಲ್ಲಿ ಸರಳೀಕರಣ, ಪ್ರತಿ ೧೦ ವರ್ಷಕ್ಕೆ ಶಾಲಾ ಪರವಾನಗಿ ನವೀಕರಣಕ್ಕೆ ಅವಕಾಶ ಮಾಡಿಕೊಡಬೇಕು ಇತ್ಯಾದಿ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಲಾಯಿತು. 
ಮನವಿಗೆ ಸ್ಪಂದಿಸಿದ ಶಾಸಕರು ಸಂಗಮೇಶ್ವರ್  ಸಂಬಂಧಿಸಿದ ಅಧಿಕಾರಿಗಳೊಂದಿಗೆ ಮಾತನಾಡಿ ಸಮಸ್ಯೆಗಳ ಪರಿಹಾರಕ್ಕೆ ಶ್ರಮಿಸುವುದಾಗಿ ಭರವಸೆ ನೀಡಿದರು.
  ಒಕ್ಕೂಟದ ಉಪಾಧ್ಯಕ್ಷರಾದ ಡಾ. ವಿನೀತ್ ಆನಂದ್, ಲತಾ ರಾಬರ್ಟ್, ಕಾರ್ಯದರ್ಶಿ ಶಿವಲಿಂಗೇಗೌಡ, ಸಹ ಕಾರ್ಯದರ್ಶಿಗಳಾದ ಬಿ.ಎಂ ಸಂತೋಷ್, ಬಿ. ದೇವರಾಜ್, ಖಜಾಂಚಿ ಡಾ. ನಾಗರಾಜ್, ನಿರ್ದೇಶಕರುಗಳಾದ ಬಿ. ಜಗದೀಶ್, ಬಿ.ಸಿ ಪ್ರಸಾದ್, ಪ್ರಭಾಕರ್, ಜರೇನಾಬೇಗಂ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ