ಮಂಗಳವಾರ, ಸೆಪ್ಟೆಂಬರ್ 23, 2025

ದಲಿತ ಸಮುದಾಯಕ್ಕೆ ಅವಮಾನ ಮಾಡಿರುವ ಯತ್ನಾಳ್ ಶಾಸಕ ಸ್ಥಾನ ವಜಾ ಮಾಡಿ ಪ್ರಕರಣ ದಾಖಲಿಸಿ

ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಡಿಎಸ್‌ಎಸ್ ಮನವಿ ಸಲ್ಲಿಸಿ ಆಗ್ರಹ 

ನಾಡಹಬ್ಬ ದಸರಾ ಅಚರಣೆ ಸಂದರ್ಭದಲ್ಲಿ ದಲಿತ ಮಹಿಳೆಯರ ಭಾವನೆಗಳಿಗೆ ಧಕ್ಕೆ ಬರುವಂತೆ ಹೇಳಿಕೆ ನೀಡುವ ಮೂಲಕ ಇಡೀ ದಲಿತ ಸಮುದಾಯಕ್ಕೆ ಅವಮಾನ ಮಾಡಿರುವ ವಿಜಯಪುರ ನಗರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಮಹಾತ್ಮ ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ) ಆಗ್ರಹಿಸಿ ಮಂಗಳವಾರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದೆ. 
    ಭದ್ರಾವತಿ: ನಾಡಹಬ್ಬ ದಸರಾ ಅಚರಣೆ ಸಂದರ್ಭದಲ್ಲಿ ದಲಿತ ಮಹಿಳೆಯರ ಭಾವನೆಗಳಿಗೆ ಧಕ್ಕೆ ಬರುವಂತೆ ಹೇಳಿಕೆ ನೀಡುವ ಮೂಲಕ ಇಡೀ ದಲಿತ ಸಮುದಾಯಕ್ಕೆ ಅವಮಾನ ಮಾಡಿರುವ ವಿಜಯಪುರ ನಗರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸುವಂತೆ ಕರ್ನಾಟಕ    ದಲಿತ ಸಂಘರ್ಷ ಸಮಿತಿ(ಮಹಾತ್ಮ ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ) ಆಗ್ರಹಿಸಿ ಮಂಗಳವಾರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದೆ. 
    ಈ ಬಾರಿ ನಾಡಹಬ್ಬ ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಸ್ತಾಕ್ ಅವರನ್ನು ರಾಜ್ಯ ಸರ್ಕಾರ ಆಯ್ಕೆ ಮಾಡಿದ ನಂತರ ಕೋಮುವಾದಿಗಳು ನಿರಂತರವಾಗಿ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಕೂಡ ವಿರೋಧ ವ್ಯಕ್ತಪಡಿಸುವ ಜೊತೆಗೆ `ತಾಯಿ ಶ್ರೀ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡಲು ಸನಾತನ ಧರ್ಮದವರು ಹೊರತುಪಡಿಸಿ ಒಬ್ಬ ದಲಿತ ಮಹಿಳೆಗೂ ಕೂಡ ಅಧಿಕಾರ ಇಲ್ಲ' ಎಂದು ಹೇಳಿಕೆ ನೀಡುವ ಮೂಲಕ ಇಡೀ ದಲಿತ ಸಮುದಾಯಕ್ಕೆ ಅವಮಾನ ಮಾಡಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಲಾಯಿತು. 
    ಈ ಹೇಳಿಕೆ ಮೂಲಕ ಯತ್ನಾಳ್ ಕೋಮು ಬಣ್ಣ ಬಯಲಾಗಿದೆ. ಈ ದೇಶದ ಸಂವಿಧಾನದಲ್ಲಿ ಎಲ್ಲಾ ಜಾತಿ, ಎಲ್ಲಾ ಧರ್ಮದವರಿಗೂ ಸಮಾನತೆ ನೀಡಲಾಗಿದೆ. ಪ್ರತಿಯೊಬ್ಬರು ಸಮಾನರು ಎಂದು ಬಾಬಾ ಸಾಹೇಬ್ ಅಂಬೇಡ್ಕರ್‌ರವರು ಸಂವಿಧಾನದಲ್ಲಿ ಹೇಳಿದ್ದಾರೆ. ಸಂವಿಧಾನವನ್ನು ಗಾಳಿಗೆ ತೂರಿ ಅಗೌರವದಿಂದ ವರ್ತಿಸುವ ಜೊತೆಗೆ ಇಡೀ ದಲಿತ ಸಮುದಾಯಕ್ಕೆ ಅವಮಾನ ಮಾಡಿರುವ ಯತ್ನಾಳ್ ವಿರುದ್ಧ ಕ್ರಮ ಕೈಗೊಂಡು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಆಗ್ರಹಿಸಲಾಯಿತು. 
    ಇದಕ್ಕೂ ಮೊದಲು ರಂಗಪ್ಪ ವೃತ್ತದಿಂದ ತಾಲೂಕು ಕಛೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಘೋಷಣೆಗಳನ್ನು ಕೂಗಲಾಯಿತು. ನಂತರ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. 
    ಡಿಎಸ್‌ಎಸ್ ರಾಜ್ಯ ಖಜಾಂಚಿ ಸತ್ಯ ಭದ್ರಾವತಿ, ರಾಜ್ಯ ಮಹಿಳಾ ಸಹ ಸಂಚಾಲಕಿ ಶಾಂತಮ್ಮ, ಜಿಲ್ಲಾ ಸಂಚಾಲಕ ಚಿನ್ನಯ್ಯ, ತಾಲೂಕು ಸಂಚಾಲಕ ಸಂದೀಪ್ ಆರ್. ಅರಹತೊಳಲು, ಜಿಲ್ಲಾ ಸಹ ಸಂಚಾಲಕ ಈಶ್ವರಪ್ಪ, ಜಿಲ್ಲಾ ಸಮಿತಿ ಸದಸ್ಯ ಮಣಿ ಜಿಂಕ್‌ಲೈನ್, ಜಿಲ್ಲಾ ಸಂಘಟನಾ ಸಂಚಾಲಕಿ ಸುವರ್ಣಮ್ಮ, ಜಿಲ್ಲಾ ಸಮಿತಿ ಸದಸ್ಯ ಕೆ. ರಂಗನಾಥ್, ಜಿಲ್ಲಾ ಅಂಗವಿಕಲರ ವಿಭಾಗದ ಕಾಣಿಕ್‌ರಾಜ್, ತಾಲೂಕು ಸಂಘಟನಾ ಸಂಚಾಲಕ ಕೆ. ಸುರೇಶ್, ನರಸಿಂಹ, ಪಿ.ಸಿ ರಾಜು(ದಾಸ್), ಸುರೇಶ್ ಅಗರದಹಳ್ಳಿ, ಗಿರೀಶ್, ಕೃಷ್ಣಪ್ಪ, ಬಿ. ಸಂಗಮೇಶ, ಯೋಗೇಶ್ವರ ನಾಯ್ಕ, ರಫೀಕ್ ಅಹಮದ್, ಕೆ. ರಾಮಲಿಂಗಂ, ಎನ್. ಪ್ರಸನ್ನಕುಮಾರ್, ಎಂ. ರೇಖಾ, ಆರ್. ವೆಂಕಟೇಶ್, ಸಿ. ಜಯಪ್ಪ, ಪರಮೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ