ಶನಿವಾರ, ಸೆಪ್ಟೆಂಬರ್ 20, 2025

ನಿವೃತ್ತ ಸರ್ಕಾರಿ ನೌಕರ ರಾಮು ನಿಧನ

ರಾಮು
    ಭದ್ರಾವತಿ : ನಗರದ ಹೊಸಮನೆ ನಿವಾಸಿ, ನಿವೃತ್ತ ಸರ್ಕಾರಿ ನೌಕರ, ಛಲವಾದಿ ಸಮಾಜದ ಹಿರಿಯರಾದ ರಾಮು(೮೬) ಶುಕ್ರವಾರ ರಾತ್ರಿ ನಿಧನ ಹೊಂದಿದರು.  
    ಪತ್ನಿ ದಮಯಂತಿ, ಬಿಜೆಪಿ ಮಂಡಲ ನಗರ ಉಪಾಧ್ಯಕ್ಷ, ಪುತ್ರ ಕೃಷ್ಣ ಛಲವಾದಿ ಸೇರಿದಂತೆ ಇಬ್ಬರು ಪುತ್ರರು, ಓರ್ವ ಪುತ್ರಿ ಇದ್ದಾರೆ. ಶನಿವಾರ ಮಧ್ಯಾಹ್ನ ಹೊಳೆಹೊನ್ನೂರು ರಸ್ತೆಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನೆರವೇರಿತು. 
ಇವರ ನಿಧನಕ್ಕೆ ಬಿಜೆಪಿ ಮಂಡಲದ ವಿವಿಧ ಮೋರ್ಚಾಗಳ ಅಧ್ಯಕ್ಷರು, ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು, ಛಲವಾದಿ ಮಹಾಸಭಾ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಸಂತಾಪ ಸೂಚಿಸಿದ್ದಾರೆ. 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ