ಶನಿವಾರ, ಸೆಪ್ಟೆಂಬರ್ 13, 2025

ಸೆ.೧೫ರಂದು ಕರಾವೇ ನೂತನ ಅಧ್ಯಕ್ಷರ ಆಯ್ಕೆ, ಪದಾಧಿಕಾರಿಗಳ ಸೇರ್ಪಡೆ ಕಾರ್ಯಕ್ರಮ


    ಭದ್ರಾವತಿ: ಟಿ.ಎ ನಾರಾಯಣಗೌಡ ನೇತೃತ್ವದ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕಿನ ನೂತನ ಮಹಿಳಾ ಅಧ್ಯಕ್ಷರ ಆಯ್ಕೆ ಮತ್ತು ಪದಾಧಿಕಾರಿಗಳ ಸೇರ್ಪಡೆ ಕಾರ್ಯಕ್ರಮ ಸೆ.೧೫ರ ಸೋಮವಾರ ಸಂಜೆ ೪ ಗಂಟೆಗೆ ನಗರದ ಬಿ.ಎಚ್ ರಸ್ತೆ, ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣ ಮುಂಭಾಗದ ನಂದಿನಿ ಹೋಟೆಲ್ ಸಭಾಂಗಣದಲ್ಲಿ ನಡೆಯಲಿದೆ. 
    ವೇದಿಕೆ ಪ್ರಮುಖರಾದ ಮಂಜು(ಕೇಬಲ್ ಮಂಜು), ಎಸ್. ವೆಂಕಟೇಶ್ ಮತ್ತು ರೂಪ ನಾಗರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ವೇದಿಕೆ ಜಿಲ್ಲಾಧ್ಯಕ್ಷೆ ಜ್ಯೋತಿ ಸೋಮಶೇಖರ್ ಕೋರಿದ್ದಾರೆ. 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ