ಶುಕ್ರವಾರ, ಸೆಪ್ಟೆಂಬರ್ 19, 2025

ಶಾಲಾ ಮಕ್ಕಳಿಗೆ ಉಚಿತ ಪರೀಕ್ಷಾ ಸಾಮಗ್ರಿ ವಿತರಣೆ

ಭದ್ರಾವತಿ ತಾಲೂಕು ಮೈಸೂರು ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಸಾರ್ವಜನಿಕ ಕ್ಷೇಮಾಭಿವೃದ್ಧಿ ಸಂಘದ ನೇತೃತ್ವದಲ್ಲಿ ಹುಡ್ಕೋ ಕಾಲೋನಿ ಪುಟ್ಟು ಮತ್ತು ಸ್ನೇಹಿತರು ನಗರಸಭೆ ವ್ಯಾಪ್ತಿಯ ಹೊಸಬುಳ್ಳಾಪುರ ಸರ್ಕಾರಿ ಶಾಲಾ ಮಕ್ಕಳಿಗೆ ಪರೀಕ್ಷೆಗೆ ಅಗತ್ಯವಿರುವ ಸಾಮಗ್ರಿಗಳನ್ನು ಉಚಿತವಾಗಿ ವಿತರಿಸಲಾಯಿತು. 
    ಭದ್ರಾವತಿ: ತಾಲೂಕು ಮೈಸೂರು ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಸಾರ್ವಜನಿಕ ಕ್ಷೇಮಾಭಿವೃದ್ಧಿ ಸಂಘದ ನೇತೃತ್ವದಲ್ಲಿ ಹುಡ್ಕೋ ಕಾಲೋನಿ ಪುಟ್ಟು ಮತ್ತು ಸ್ನೇಹಿತರು ನಗರಸಭೆ ವ್ಯಾಪ್ತಿಯ ಹೊಸಬುಳ್ಳಾಪುರ ಸರ್ಕಾರಿ ಶಾಲಾ ಮಕ್ಕಳಿಗೆ ಪರೀಕ್ಷೆಗೆ ಅಗತ್ಯವಿರುವ ಸಾಮಗ್ರಿಗಳನ್ನು ಉಚಿತವಾಗಿ ವಿತರಿಸಲಾಯಿತು. 
    ಸರ್ಕಾರ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಅಧ್ಯಕ್ಷ ಬಿ.ಎಸ್ ಗಣೇಶ್ ಹುಟ್ಟುಹಬ್ಬ ಹಾಗು ತಾಲೂಕು ಮೈಸೂರು ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಸಾರ್ವಜನಿಕ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಆರ್. ವೆಂಕಟೇಶ್‌ರವರ ತಂದೆ-ತಾಯಿಯವರ ಸ್ಮರಣಾರ್ಥ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಸಾಮಗ್ರಿಗಳನ್ನು ವಿತರಿಸಿ ಸದ್ಬಳಕೆ ಮಾಡಿಕೊಳ್ಳುವ ಮೂಲಕ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಕಾಯ್ದುಕೊಳ್ಳುವಂತೆ ಮನವಿ ಮಾಡಲಾಯಿತು. 
    ಡಿಎಸ್‌ಎಸ್ ಮುಖಂಡ ಪರಮೇಶ್, ನಗರಸಭೆ ಸೂಪರ್‌ವೈಸರ್ ನರಸಿಂಹ, ಸುಬ್ರಮಣಿ, ವೆಂಕಟೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ