ಭಾನುವಾರ, ಸೆಪ್ಟೆಂಬರ್ 7, 2025

ಅಂಧರ ಕೇಂದ್ರದಲ್ಲಿ ೫ನೇ ವರ್ಷದ ವಿನಾಯಕ ಮಹೋತ್ಸವ : ಸತ್ಯನಾರಾಯಣ ಪೂಜೆ



ಭದ್ರಾವತಿ ನ್ಯೂಟೌನ್ ಸಿದ್ದಾರ್ಥ ಅಂಧರ ಕೇಂದ್ರದಲ್ಲಿ ಪ್ರತಿಷ್ಠಾಪಿಸಲಾಗಿರುವ ೫ನೇ ವರ್ಷದ ವಿನಾಯಕ ಮಹೋತ್ಸವದ ಅಂಗವಾಗಿ ಭಾನುವಾರ ಸತ್ಯನಾರಾಯಣ ಪೂಜೆ ನೆರವೇರಿಸಲಾಯಿತು. 
    ಭದ್ರಾವತಿ : ನಗರದ ನ್ಯೂಟೌನ್ ಸಿದ್ದಾರ್ಥ ಅಂಧರ ಕೇಂದ್ರದಲ್ಲಿ ಪ್ರತಿಷ್ಠಾಪಿಸಲಾಗಿರುವ ೫ನೇ ವರ್ಷದ ವಿನಾಯಕ ಮಹೋತ್ಸವದ ಅಂಗವಾಗಿ ಭಾನುವಾರ ಸತ್ಯನಾರಾಯಣ ಪೂಜೆ ನೆರವೇರಿಸಲಾಯಿತು. 
    ಸಿದ್ದಾರ್ಥ ಅಂಧರ ಕೇಂದ್ರದ ವಿಕಲಚೇತನರೊಂದಿಗೆ ಸ್ಥಳೀಯರಾದ ತರುಣ್ ಮತ್ತು ಸ್ನೇಹಿತರು ವಿನಾಯಕ ಮೂರ್ತಿ ಪ್ರತಿಷ್ಠಾಪನೆ ಕಾರ್ಯದಲ್ಲಿ ನೆರವಾಗುತ್ತಿರುವುದು ವಿಶೇಷವಾಗಿದೆ. ಸಿದ್ದಾರ್ಥ ಅಂಧರ ಕೇಂದ್ರದಲ್ಲಿ ರಾಷ್ಟ್ರೀಯ ಹಬ್ಬ ಹಾಗು ನಾಡಹಬ್ಬಗಳ ಜೊತೆಗೆ ಎಲ್ಲಾ ಧರ್ಮದ ಪ್ರತಿಯೊಂದು ಹಬ್ಬ ಹರಿದಿನಗಳನ್ನು ವಿಶೇಷವಾಗಿ ಆಚರಿಸಿಕೊಂಡು ಬರಲಾಗುತ್ತಿದೆ. 
ವಿನಾಯಕ ಮಹೋತ್ಸವ ಆಚರಣೆಯೊಂದಿಗೆ ವಿಕಲಚೇತನರಲ್ಲೂ ಸಂಘಟನೆ ಮಹತ್ವ ಹಾಗು ಧಾರ್ಮಿಕ ಆಚರಣೆಯ ಮೌಲ್ಯಗಳನ್ನು ತಿಳಿಸಿಕೊಡುವ ಪ್ರಯತ್ನ ಕೈಗೊಳ್ಳಲಾಗುತ್ತಿದೆ. ಒಂದೆಡೆ ಸಂಭ್ರಮ, ಮತ್ತೊಂದೆಡೆ ವಿಕಲಚೇತನರಲ್ಲಿ ಆತ್ಮಸ್ಥೈರ್ಯ ಹೆಚ್ಚಿಸುವಲ್ಲಿ ಸಹ ವಿನಾಯಕ ಮಹೋತ್ಸವ ಸಹಕಾರಿಯಾಗಿದೆ. 
    ಈ ಬಾರಿ ವಿಶೇಷವಾಗಿ ಸ್ಥಳೀಯರಾದ ಶಿವಕುಮಾರ್ ಮತ್ತು ಎಸ್. ಭರತ್ ಕುಟುಂಬಸ್ಥರು ಸತ್ಯನಾರಾಯಣ ಪೂಜೆ ನೆರವೇರಿಸುವ ಮೂಲಕ ಆಚರಣೆಗೆ ಮತ್ತುಷ್ಟು ವೈಭವ ತಂದು ಕೊಟ್ಟಿದ್ದಾರೆ. ಅರ್ಚಕ ಪ್ರದೀಪ್ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ನೆರವೇರಿದವು. 
    ಈ ಬಾರಿ ಉಗ್ರ ನರಸಿಂಹನ ಪ್ರತಿ ರೂಪವಾಗಿ ಅಕರ್ಷಕ ವಿನಾಯಕ ಮೂರ್ತಿ ಪ್ರತಿಷ್ಠಾಪಿಸಲಾಗಿದ್ದು, ಈ ಮೂರ್ತಿಯನ್ನು ಸಿದ್ದಾರೂಢನಗರ ಶಿಲ್ಪ ಕಲಾವಿದರು ನಿರ್ಮಿಸಿದ್ದಾರೆ. ಮೂರ್ತಿ ಸುಮಾರು ೮ ಅಡಿ ಎತ್ತರವಿದ್ದು, ಸೆ.೨೨ರಂದು ಜನ್ನಾಪುರ-ಸಿದ್ದಾಪುರ ಕೆರೆಯಲ್ಲಿ ವಿಸರ್ಜನೆಗೊಳ್ಳಲಿದೆ.  

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ