ಭದ್ರಾವತಿ ಹಳೇನಗರದ ಶ್ರೀ ವಾದಿರಾಜಸ್ವಾಮಿ, ಶ್ರೀ ರಾಘವೇಂದ್ರಸ್ವಾಮಿಗಳವರ ಮಠ ಹಾಗು ಸಮುದಾಯ ಭವನದ ಅಭಿವೃದ್ಧಿಗೆ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ರವರು ೪ ಲಕ್ಷ ರು. ಅನುದಾನ ಬಿಡುಗಡೆಗೊಳಿಸಿದ್ದಾರೆ. ಈ ಹಿನ್ನಲೆಯಲ್ಲಿ ಅವರನ್ನು ಸನ್ಮಾನಿಸಿ ಗೌರವಿಸುವ ಮೂಲಕ ಕೃತಜ್ಞತೆ ಸಲ್ಲಿಸಲಾಯಿತು.
ಭದ್ರಾವತಿ: ಹಳೇನಗರದ ಶ್ರೀ ವಾದಿರಾಜಸ್ವಾಮಿ, ಶ್ರೀ ರಾಘವೇಂದ್ರಸ್ವಾಮಿಗಳವರ ಮಠ ಹಾಗು ಸಮುದಾಯ ಭವನದ ಅಭಿವೃದ್ಧಿಗೆ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ರವರು ೪ ಲಕ್ಷ ರು. ಅನುದಾನ ಬಿಡುಗಡೆಗೊಳಿಸಿದ್ದಾರೆ.
ನಿಗಮದಿಂದ ಅನುದಾನ ಬಿಡುಗಡೆಗೊಳಿಸಿದ್ದು, ೪ ಲಕ್ಷ ರು. ಚೆಕ್ ಶ್ರೀ ಗುರುರಾಜ ಸೇವಾ ಸಮಿತಿಗೆ ನೀಡಿದರು. ಸಂಗಮೇಶ್ವರ್ರವರನ್ನು ಸೇವಾ ಸಮಿತಿಯಿಂದ ಸನ್ಮಾನಿಸಿ ಗೌರವಿಸುವ ಮೂಲಕ ಕೃತಜ್ಞತೆ ಸಲ್ಲಿಸಲಾಯಿತು.
ಸಮಿತಿ ಅಧ್ಯಕ್ಷ ಮುರಳಿಧರ ತಂತ್ರಿ, ಉಪಾಧ್ಯಕ್ಷರಾದ ಸುಮಾ ರಾಘವೇಂದ್ರ, ಪ್ರಧಾನ ಕಾರ್ಯದರ್ಶಿ ಜಿ. ರಮಾಕಾಂತ್ ಹಾಗೂ ಶುಭ ಗುರುರಾಜ್ ವಿ.ಬ್ರಾ ಶ್ರೀ ಗೋಪಾಲಕೃಷ್ಣ ಆಚಾರ್ ಮತ್ತು ಸಮೀರಾಚಾರ್ ಹಾಗು ಮದ್ವ ಮಂಡಳಿ ಅಧ್ಯಕ್ಷ ಜಯತೀರ್ಥ, ಸುಧೀಂದ್ರ, ವಿದ್ಯಾನಂದನಾಯಕ್, ಶೇಷಗಿರಿ, ಗೋಪಾಲಕೃಷ್ಣ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ