ಶುಕ್ರವಾರ, ಸೆಪ್ಟೆಂಬರ್ 26, 2025

ಪ್ರಧಾನಿ ನರೇಂದ್ರ ಮೋದಿ ೭೫ನೇ ಜನ್ಮದಿನದ ಅಂಗವಾಗಿ ಸೆ.೨೭ರಂದು ಪ್ರಬುದ್ದರ ಗೋಷ್ಠಿ

ಪ್ರಧಾನಿ ನರೇಂದ್ರ ಮೋದಿ

    ಭದ್ರಾವತಿ : ಬಿಜೆಪಿ ಮಂಡಲದಿಂದ ಪ್ರಧಾನಿ ನರೇಂದ್ರ ಮೋದಿಯವರ ೭೫ನೇ ಜನ್ಮದಿನದ ಅಂಗವಾಗಿ ಸೆ.೨೭ರ ಶನಿವಾರ ಸಂಜೆ ೫.೪೫ಕ್ಕೆ ನ್ಯೂಟೌನ್ ರೋಟರಿ ಕ್ಲಬ್ ಸಭಾಂಗಣದಲ್ಲಿ ಪ್ರಬುದ್ದರ ಗೋಷ್ಠಿ ಹಮ್ಮಿಕೊಳ್ಳಲಾಗಿದೆ. 
    ನವ ಭಾರತದ ಆರ್ಥಿಕ ಸುಧಾರಣೆಗಳು ಕುರಿತು ಚರ್ಚೆ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ವಿಧಾನಪರಿಷತ್ ಸದಸ್ಯರಾದ ಡಾ. ಧನಂಜಯ ಸರ್ಜಿ ಮತ್ತು ಡಿ.ಎಸ್ ಅರುಣ್ ಆಗಮಿಸಲಿದ್ದಾರೆ. ಪಕ್ಷದ ಜಿಲ್ಲಾಧ್ಯಕ್ಷ ಎನ್.ಕೆ ಜಗದೀಶ್ ಅಧ್ಯಕ್ಷತೆವಹಿಸಲಿದ್ದಾರೆ. ಮಂಡಲ ಅಧ್ಯಕ್ಷರಾದ ಜಿ. ಧರ್ಮಪ್ರಸಾದ್, ಕೆ.ಎಚ್ ತೀರ್ಥಯ್ಯ, ಕೆ.ಎನ್ ಶ್ರೀಹರ್ಷ, ಸಾಗರ್ ಮತ್ತು ಭರತ್ ಆಗಮಿಸಲಿದ್ದಾರೆ. 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ