ಸೋಮವಾರ, ಸೆಪ್ಟೆಂಬರ್ 15, 2025

ಅಭಿಯಂತರರ ದಿನ : ವಿಐಎಸ್‌ಎಲ್ ಸಂಸ್ಥಾಪಕ ಅಧ್ಯಕ್ಷರಿಗೆ ಗೌರವ ವಂದನೆ

ಸರ್‌ಎಂವಿ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಅಧಿಕಾರಿಗಳು, ಕಾರ್ಮಿಕರು

ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಸಂಸ್ಥಾಪಕರು, ಮೊದಲ ಅಧ್ಯಕ್ಷರಾದ ಭಾರತರತ್ನ, ದೇಶದ ಅಪ್ರತಿಮ ಅಭಿಯಂತರ ಸರ್.ಎಂ ವಿಶ್ವೇಶ್ವರಾಯರವರ ೧೬೫ನೇ ಜನ್ಮದಿನದ ಅಂಗವಾಗಿ ಸೋಮವಾರ `ಅಭಿಯಂತರರ ದಿನ' ಆಚರಿಸಲಾಯಿತು. 
    ಭದ್ರಾವತಿ : ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಸಂಸ್ಥಾಪಕರು, ಮೊದಲ ಅಧ್ಯಕ್ಷರಾದ ಭಾರತರತ್ನ, ದೇಶದ ಅಪ್ರತಿಮ ಅಭಿಯಂತರ ಸರ್.ಎಂ ವಿಶ್ವೇಶ್ವರಾಯರವರ ೧೬೫ನೇ ಜನ್ಮದಿನದ ಅಂಗವಾಗಿ ಸೋಮವಾರ `ಅಭಿಯಂತರರ ದಿನ' ಆಚರಿಸಲಾಯಿತು. 
    ಕಾರ್ಖಾನೆ ಆಡಳಿತ ಕಛೇರಿ ಆವರಣದಲ್ಲಿರುವ ವಿಶ್ವೇಶ್ವರಾಯರವರ ಪ್ರತಿಮೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ವಂದನೆ ಸಲ್ಲಿಸಲಾಯಿತು. ಕಾರ್ಯಪಾಲಕ ನಿರ್ದೇಶಕ ಬಿ.ಎಲ್ ಚಂದ್ವಾನಿಯವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಮಹಾಪ್ರಬಂದಕ(ಸ್ಥಾವರ) ಕೆ.ಎಸ್ ಸುರೇಶ್, ಮಹಾಪ್ರಬಂಧಕ (ಮಾನವ ಸಂಪನ್ಮೂಲ ಮತ್ತು ಸಾರ್ವಜನಿಕ ಸಂಪರ್ಕ) ಎಲ್. ಪ್ರವೀಣ್ ಕುಮಾರ್, ಕಾರ್ಮಿಕ ಸಂಘದ ಅಧ್ಯಕ್ಷ ಜೆ. ಜಗದೀಶ್, ಅಧಿಕಾರಿಗಳ ಸಂಘದ ಅಧ್ಯಕ್ಷ ಪಾರ್ಥಸಾರಥಿ ಮಿಶ್ರಾ ಸೇರಿದಂತೆ ಇನ್ನಿತರ ಅಧಿಕಾರಿಗಳು, ಕಾಯಂ ಹಾಗು ಗುತ್ತಿಗೆ ಕಾರ್ಮಿಕರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ