ಭದ್ರಾವತಿ ನಗರದ ಕೆಎಸ್ಆರ್ಟಿಸಿ ಮುಖ್ಯ ಬಸ್ ನಿಲ್ದಾಣ ಹಾಗು ಬಾರಂದೂರು, ದೊಣಬಘಟ್ಟ ಮತ್ತು ಬಾಳೆಮಾರನಹಳ್ಳಿ ಗ್ರಾಮಗಳಲ್ಲಿ ಬಾಲ್ಯ ವಿವಾಹದಿಂದ ಎದುರಾಗುವ ಸಮಸ್ಯೆಗಳು ಹಾಗು ಬಾಲ್ಯ ವಿವಾಹ ನಿರ್ಮೂಲನೆ ಕುರಿತು ಸಂತ ಡೊಮಿನಿಕ್ ಶಾಲಾ ಮಕ್ಕಳು ಬೀದಿ ನಾಟಕದ ಮೂಲಕ ಜಾಗೃತಿ ಮೂಡಿಸಿದರು.
ಭದ್ರಾವತಿ: ಸಾಮಾಜಿಕ ಪಿಡುಗುಗಳಲ್ಲಿ ಅತಿಮುಖ್ಯವಾದ ಪಿಡುಗು ಬಾಲ್ಯ ವಿವಾಹ ನಿರ್ಮೂಲನೆ ಕುರಿತು ನಗರದ ಸಂತ ಡೊಮಿನಿಕ್ ಶಾಲಾ ಮಕ್ಕಳು ವಿವಿಧೆಡೆ ಬೀದಿ ನಾಟಕ ಪ್ರದರ್ಶನದ ಮೂಲಕ ಜಾಗೃತಿ ಮೂಡಿಸಿದರು.
ನಗರದ ಕೆಎಸ್ಆರ್ಟಿಸಿ ಮುಖ್ಯ ಬಸ್ ನಿಲ್ದಾಣ ಹಾಗು ಬಾರಂದೂರು, ದೊಣಬಘಟ್ಟ ಮತ್ತು ಬಾಳೆಮಾರನಹಳ್ಳಿ ಗ್ರಾಮಗಳಲ್ಲಿ ಬಾಲ್ಯ ವಿವಾಹದಿಂದ ಎದುರಾಗುವ ಸಮಸ್ಯೆಗಳು ಹಾಗು ಬಾಲ್ಯ ವಿವಾಹ ನಿರ್ಮೂಲನೆ ಕುರಿತು ಜಾಗೃತಿ ಮೂಡಿಸಲಾಯಿತು.
ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಬೀದಿ ನಾಟಕ ಪ್ರದರ್ಶನ ವೀಕ್ಷಿಸಿ ವಿದ್ಯಾಸಂಸ್ಥೆ ಆಡಳಿತ ಮಂಡಳಿಗೂ ಹಾಗು ಶಾಲಾ ಮಕ್ಕಳಿಗೂ ಮೆಚ್ಚುಗೆ ವ್ಯಕ್ತಪಡಿಸುವ ಮೂಲಕ ಈ ರೀತಿಯ ಜಾಗೃತಿ ಕಾರ್ಯಕ್ರಮಗಳು ಹೆಚ್ಚಾಗಿ ನಡೆಯುವ ಮೂಲಕ ಸ್ವಾಸ್ಥ್ಯ ಸಮಾಜ ನಿರ್ಮಾಣಗೊಳಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಮುಂದಾಗಬೇಕೆಂದರು.
ಕಾರೆಹಳ್ಳಿ ಸಂತ ಅಂತೋನಿ ದೇವಾಲಯದ ಧರ್ಮ ಗುರುಗಳು ವಂದನೆಯ ಸಂತೋಷ್ ಡಿ ಅಲ್ಮೇಡಾ, ಸಂತ ಡೊಮಿನಿಕ್ ಶಾಲೆ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಜೆಲ್ಫಿ, ಸಿಸ್ಟರ್ ಲಾಲಮ್ಮ ಹಾಗೂ ಶಾಲಾ ಶಿಕ್ಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ