ಗುರುವಾರ, ಅಕ್ಟೋಬರ್ 2, 2025

ನಾಡಹಬ್ಬ ದಸರಾ ಅದ್ದೂರಿ ಮೆರವಣಿಗೆಗೆ ಶಾಸಕ ಬಿ.ಕೆ ಸಂಗಮೇಶ್ವರ್ ಚಾಲನೆ

ಅಲಂಕೃತಗೊಂಡ ದೇವಾನುದೇವತೆಗಳು, ಬಾಲ್ಯವಿವಾಹ ಜಾಗೃತಿ, ಗಮನ ಸೆಳೆದ ನವದುರ್ಗಿಯರು

ಭದ್ರಾವತಿ ನಗರಸಭೆಯಿಂದ ನಾಡಹಬ್ಬ ದಸರಾ ಅಂಗವಾಗಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಉತ್ಸವ ಮೆರವಣೆಗೆಗೆ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಶನಿವಾರ ಚಾಲನೆ ನೀಡಿದರು. 
    ಭದ್ರಾವತಿ : ನಗರಸಭೆಯಿಂದ ನಾಡಹಬ್ಬ ದಸರಾ ಅಂಗವಾಗಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಉತ್ಸವ ಮೆರವಣೆಗೆಗೆ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಶನಿವಾರ ಚಾಲನೆ ನೀಡಿದರು. 
    ನಗರದ ಬಿ.ಎಚ್ ರಸ್ತೆ, ಲೋಯರ್ ಹುತ್ತಾ, ಶ್ರೀ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಬಳಿ ಸಂಜೆ ಸುಮಾರು ೪.೪೫ರ ಸಮಯದಲ್ಲಿ ಶ್ರೀ ಚಾಮುಂಡೇಶ್ವರಿ ದೇವಿ ಹಾಗು ನಂದಿ ಧ್ವಜಕ್ಕೆ ವಿಶೇಷ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಲಾಯಿತು. ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾರಾಜ್‌ಕುಮಾರ್, ಉಪಾಧ್ಯಕ್ಷ ಎಂ. ಮಣಿ ಎಎನ್‌ಎಸ್, ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ರಿಯಾಜ್, ಪೌರಾಯುಕ್ತ ಕೆ.ಎನ್ ಹೇಮಂತ್, ಆಶ್ರಯ ಸಮಿತಿ ಅಧ್ಯಕ್ಷ ಗೋಪಾಲ್,  ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ. ಸಿದ್ದಬಸಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.


ಭದ್ರಾವತಿ ನಗರಸಭೆಯಿಂದ ನಾಡಹಬ್ಬ ದಸರಾ ಅಂಗವಾಗಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಉತ್ಸವ ಮೆರವಣೆಗೆಗೆ ಸುಮಾರು ೪೦ಕ್ಕೂ ಹೆಚ್ಚು ಅಲಂಕೃತಗೊಂಡ ದೇವಾನುದೇವತೆಗಳು ಪಾಲ್ಗೊಂಡಿದ್ದವು. 
    ಹಳೇನಗರದ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ, ಶ್ರೀ ಮೈಲಾರಲಿಂಗೇಶ್ವರ ಸ್ವಾಮಿ, ಶ್ರೀ ಆಂಜನೇಯ ಸ್ವಾಮಿ, ಶ್ರೀ ರಾಮೇಶ್ವರಸ್ವಾಮಿ, ಶ್ರೀ ಹಳದಮ್ಮ ದೇವಿ, ಶ್ರೀ ಕಾಳಿಕಾಂಬ ದೇವಿ, ಶ್ರೀ ಕೋಟೆ ಬಸವಣ್ಣ ಸ್ವಾಮಿ, ಮಹಾತ್ಮಗಾಂಧಿ ರಸ್ತೆ, ವಲಯ ಅರಣ್ಯಾಧಿಕಾರಿಗಳ ಕಛೇರಿ ಪಕ್ಕದಲ್ಲಿರುವ ಶ್ರೀ ಧರ್ಮಶಾಸ್ತ ಅಯ್ಯಪ್ಪ ಸ್ವಾಮಿ, ಹೊಸಮನೆ ವಿಜಯನಗರ ಶ್ರೀ ಶಿವಶಕ್ತಿ ಅಂಗಾಳ ಮರಮೇಶ್ವರಿ, ಭೂತನಗುಡಿ ಶ್ರೀ ಮಹಾಗಣಪತಿ, ಶ್ರೀಶನೇಶ್ವರ ಸ್ವಾಮಿ, ಶ್ರೀ ಕೆಂಚಮ್ಮ ಮತ್ತು ಭೂತಪ್ಪ ಸ್ವಾಮಿ, ಜಟ್‌ಪಟ್ ಆಶ್ರಯ ಕಾಲೋನಿ ಶ್ರೀ ಭಾವಿರುದ್ರ ವರಗುರು ಶ್ರೀ ವೀರಭದ್ರೇಶ್ವರ ಸ್ವಾಮಿ ಮತ್ತು ಭದ್ರಾಕಾಳಮ್ಮ ದೇವಿ, ಭೋವಿ ಕಾಲೋನಿ ಶ್ರೀ ಪಿಳ್ಳಗಮ್ಮ ದೇವಿ, ಶ್ರೀ ಸವದತ್ತಿ ಯಲ್ಲಮ್ಮ, ಶ್ರೀ ಶೆಟ್ಟಮ್ಮದೇವಿ, ಶ್ರೀ ಲಕ್ಷ್ಮಮ್ಮ ದೇವಿ, ಶ್ರೀ ಸಿಗಂದೂರು ಚೌಡೇಶ್ವರಿ, ಶ್ರೀ ಕಾಲರಮ್ಮ ದೇವಿ, ಕುಕ್ಕುವಾಡೇಶ್ವರಿ ದೇವಿ, ಶ್ರೀ ಕೋಟೆ ಮಾರಿಯಮ್ಮ ದೇವಿ, ದಾನವಾಡಮ್ಮ, ತಮ್ಮಣ್ಣ ಕಾಲೋನಿ ಶ್ರೀ ಚೌಡೇಶ್ವರಿ ದೇವಿ, ಸಂತೇ ಮೈದಾನದ ಶ್ರೀ ಸುಂಕಲಮ್ಮ ದೇವಿ, ಜನ್ನಾಪುರ ಪ್ಲೇಗ್ ಮಾರಿಯಮ್ಮ,  ವಿಜಯನಗರ ಶ್ರೀ ಶನಿದೇವರು, ತಮ್ಮಣ್ಣ ಕಾಲೋನಿ ಮರದಮ್ಮ ದೇವಿ, ಚಾಮೇಗೌಡ ಏರಿಯಾ, ಮೀನುಗಾರರ ಬೀದಿ, ಜನ್ನಾಪುರ ಶ್ರೀ ಮಾರಿಯಮ್ಮ ದೇವಿ, ಚನ್ನಗಿರಿ ರಸ್ತೆ ಶ್ರೀ ಮಾರಿಕಾಂಬ ದೇವಿ, ನ್ಯೂಟೌನ್ ಶ್ರೀ ಮಾತಂಗಮ್ಮ ದೇವಿ, ಹಳೇನಗರ ಉಪ್ಪಾರಕೇರಿ ಶ್ರೀ ಅಂತರಘಟ್ಟಮ್ಮ, ಗೌಳಿಗರ ಬೀದಿ ಶ್ರೀ ರಾಮೇಶ್ವರ ಸ್ವಾಮಿ, ದೊಣಬಘಟ್ಟ ರಸ್ತೆ ಶ್ರೀ ರಂಗನಾಥ ಸ್ವಾಮಿ, ಶಿವರಾಮನಗರ ಶ್ರೀ ಯಲ್ಲಮ್ಮ ದೇವಿ, ಗೌಳಿಗರ ಬೀದಿ ಶ್ರೀ ಕರುಮಾರಿಯಮ್ಮ ದೇವಿ, ಬಸವೇಶ್ವರ ವೃತ್ತದ ಶ್ರೀ ಕುರುಪೇಶ್ವರಿ ದೇವಿ, ಶ್ರೀ ಕುಕ್ಕುವಾಡೇಶ್ವರಿ ದೇವಿ, ಹೊಸಮನೆ ಶ್ರೀ ಕೆರೆಕೋಡಮ್ಮ ದೇವಿ, ರಂಗಪ್ಪ ವೃತ್ತ ಗುಳ್ಳಮ್ಮ ದೇವಿ, ಅಂಬೇಡ್ಕರ್ ನಗರ(ಕಂಚಿನ ಬಾಗಿಲು ವೃತ್ತ) ದುರ್ಗಾಂಬಾ ದೇವಿ, ದುರ್ಗಿನಗರದ ಶ್ರೀ ದುರ್ಗಮ್ಮ ದೇವಿ, ಜೈಭೀಮ್ ನಗರದ ಶ್ರೀ ದೊಡ್ಡಮ್ಮ ದೇವಿ, ಕಂಚಿನಬಾಗಿಲು ಮತ್ತು ಬಿ.ಎಚ್ ರಸ್ತೆ ಶ್ರೀ ಚೌಡೇಶ್ವರಿ ದೇವಿ ಸೇರಿದಂತೆ ಸುಮಾರು ೪೦ಕ್ಕೂ ಹೆಚ್ಚು ದೇವಸ್ಥಾನಗಳ ಅಲಂಕೃತಗೊಂಡ ದೇವಾನುದೇವತೆಗಳು ಮೆರವಣಿಗೆಯಲ್ಲಿ ಪಾಲ್ಗೊಂಡು ಕಣ್ಮನ ಸೆಳೆದವು.


ಭದ್ರಾವತಿ ನಗರಸಭೆಯಿಂದ ನಾಡಹಬ್ಬ ದಸರಾ ಅಂಗವಾಗಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಉತ್ಸವ ಮೆರವಣೆಗೆಯಲ್ಲಿ ಬಾರಂದೂರು ಹಳ್ಳಿಕೆರೆ ಡೊಮಿನಿಕ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ವಿದ್ಯಾರ್ಥಿಗಳು ಬಾಲ್ಯವಿವಾಹ ಕುರಿತು ಜಾಗೃತಿ ಮೂಡಿಸುವ ಸ್ತಬ್ದ ಚಿತ್ರ ಈ ಬಾರಿ ವಿಶೇಷವಾಗಿ ಕಂಡು ಬಂದಿತು.    
    ಡೊಳ್ಳು ಕುಣಿತ, ವೀರಗಾಸೆ, ಚಂಡೆ ವಾದ್ಯ, ಗಾರುಡಿ ಗೊಂಬೆ ಪ್ರದರ್ಶನ, ಬ್ಯಾಂಡ್‌ಸೆಟ್, ಗೊರವ ನೃತ್ಯ ಸೇರಿದಂತೆ ವಿವಿಧ ಕಲಾತಂಡಗಳು ಮೆರವಣಿಗೆಗೆ ಮತ್ತಷ್ಟು ಮೆರಗು ನೀಡಿದವು.  
    ಗಾಂಧಿನಗರದ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆ ವಿದ್ಯಾರ್ಥಿಗಳು ನವದುರ್ಗಿಯರ ವೇಷದಲ್ಲಿ ಗಮನ ಸೆಳೆದರು. ಬಾರಂದೂರು ಹಳ್ಳಿಕೆರೆ ಡೊಮಿನಿಕ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ವಿದ್ಯಾರ್ಥಿಗಳು ಬಾಲ್ಯವಿವಾಹ ಕುರಿತು ಜಾಗೃತಿ ಮೂಡಿಸುವ ಸ್ಥಬ್ದ ಚಿತ್ರ ಈ ಬಾರಿ ಮೆರವಣಿಗೆಯಲ್ಲಿ ವಿಶೇಷವಾಗಿ ಕಂಡು ಬಂದಿತು.  ಸಿಂಹಾಸಿನಿಯಾದ ಚಾಮುಂಡೇಶ್ವರಿ ದೇವಿ ರೂಪದಲ್ಲಿ ಬಿ.ಎಚ್ ರಸ್ತೆ, ಶಂಕರ್ ಚಿತ್ರಮಂದಿರ ಸಮೀಪದ ಶ್ರೀ ವಿಶ್ವಸ್ವರೂಪಿಣಿ ಮಾರಿಯಮ್ಮ ದೇವಿ ಅಲಂಕಾರ ಎಲ್ಲರನ್ನು ಆಕರ್ಷಿಸಿತು.  
ಮೆರವಣಿಗೆ ಬಿ.ಎಚ್ ರಸ್ತೆ, ಡಾ. ರಾಜ್‌ಕುಮಾರ್ ರಸ್ತೆ ಮೂಲಕ ಹಾಲಪ್ಪ ವೃತ್ತ, ಮಾಧವಚಾರ್ ವೃತ್ತ, ರಂಗಪ್ಪ ವೃತ್ತ ತಲುಪಿ ತಾಲೂಕು ಕಛೇರಿ ರಸ್ತೆ ಮೂಲಕ ಕನಕಮಂಟಪ ಮೈದಾನದವರೆಗೂ ಸಾಗಿತು. ನಂತರ ಬನ್ನಿಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ನಾಡಹಬ್ಬ ದಸರಾ ಕುರಿತು ಮಾತನಾಡಿದರು. ತಹಸೀಲ್ದಾರ್ ಪರುಸಪ್ಪ ಕುರುಬರ ಬನ್ನಿ ಮುಡಿಯುವ ಮೂಲಕ ಬನ್ನಿ ವಿತರಿಸಿ ಹಬ್ಬದ ಶುಭಕೋರಿದರು. ಕೊನೆಯಲ್ಲಿ ರಾವಣನ ದಹನದೊಂದಿಗೆ ಹಬ್ಬಕ್ಕೆ ತೆರೆ ಎಳೆಯಲಾಯಿತು.

ಭದ್ರಾವತಿ ನಗರಸಭೆಯಿಂದ ನಾಡಹಬ್ಬ ದಸರಾ ಅಂಗವಾಗಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಉತ್ಸವ ಮೆರವಣೆಗೆಯಲ್ಲಿ ಗಾಂಧಿನಗರದ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆ ವಿದ್ಯಾರ್ಥಿಗಳು ನವದುರ್ಗಿಯರ ವೇಷದಲ್ಲಿ ಗಮನ ಸೆಳೆದರು.
    ನಾಡಹಬ್ಬ ದಸರಾ ಆಚರಣೆ ವಿವಿಧ ಸಮಿತಿಗಳ ಅಧ್ಯಕ್ಷರು, ಸದಸ್ಯರು, ಚುನಾಯಿತ ಹಾಗು ನಾಮನಿರ್ದೇಶಿತ ನಗರಸಭೆ ಸದಸ್ಯರು, ನಗರಸಭೆ ಅಧಿಕಾರಿಗಳು, ಸಿಬ್ಬಂದಿಗಳು, ಪೌರ ಸೇವಾ ನೌಕರರ ಸೇವಾ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಪೌರಕಾರ್ಮಿಕರು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳು, ನೌಕರರು, ವಿವಿಧ ರಾಜಕೀಯ ಪಕ್ಷಗಳ, ಸಂಘ-ಸಂಸ್ಥೆಗಳ ಪ್ರಮುಖರು, ವಿವಿಧ ದೇವಸ್ಥಾನಗಳ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು, ಅರ್ಚಕರು, ಗಣ್ಯರು ಸೇರಿದಂತೆ ಸ್ಥಳೀಯರು ಉತ್ಸವ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.   
 

ಭದ್ರಾವತಿ ನಗರಸಭೆಯಿಂದ ನಾಡಹಬ್ಬ ದಸರಾ ಅಂಗವಾಗಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಉತ್ಸವ ಮೆರವಣೆಗೆಯಲ್ಲಿ ಸಿಂಹಾಸಿನಿಯಾದ ಚಾಮುಂಡೇಶ್ವರಿ ದೇವಿ ರೂಪದಲ್ಲಿ ಬಿ.ಎಚ್ ರಸ್ತೆ, ಶಂಕರ್ ಚಿತ್ರಮಂದಿರ ಸಮೀಪದ ಶ್ರೀ ವಿಶ್ವಸ್ವರೂಪಿಣಿ ಮಾರಿಯಮ್ಮ ದೇವಿ ಅಲಂಕಾರ ಎಲ್ಲರನ್ನು ಆಕರ್ಷಿಸಿತು.  

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ