ಗುರುವಾರ, ಅಕ್ಟೋಬರ್ 23, 2025

ಟಿಎಪಿಸಿಎಂಎಸ್ ಆಡಳಿತ ಮಂಡಳಿಗೆ ಕಾಂಗ್ರೆಸ್ ಬೆಂಬಲಿತ ನೂತನ ನಿರ್ದೇಶಕರು

೨೫ ಲಕ್ಷ ರು. ನಷ್ಟ ತೀರಿಸಿ, ರೈತರಿಗೆ ಅನುಕೂಲ ಮಾಡಿಕೊಡಲು ಬದ್ಧ 

ಭದ್ರಾವತಿ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಆಡಳಿತ ಮಂಡಳಿಗೆ ನೂತನ ೧೩ ಜನ ನಿರ್ದೇಶಕರು ಆಯ್ಕೆಯಾಗಿದ್ದು, ನಗರದ ಚನ್ನಗಿರಿ ರಸ್ತೆಯಲ್ಲಿರುವ  ಸಂಘದ ಕಛೇರಿಯಲ್ಲಿ ಗುರುವಾರ ನೂತನ ನಿರ್ದೇಶಕರು ಸಂಭ್ರಮ ಹಂಚಿಕೊಂಡರು. 
    ಭದ್ರಾವತಿ : ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಆಡಳಿತ ಮಂಡಳಿಗೆ ನೂತನ ೧೩ ಜನ ನಿರ್ದೇಶಕರು ಆಯ್ಕೆಯಾಗಿದ್ದು, ನಗರದ ಚನ್ನಗಿರಿ ರಸ್ತೆಯಲ್ಲಿರುವ  ಸಂಘದ ಕಛೇರಿಯಲ್ಲಿ ಗುರುವಾರ ನೂತನ ನಿರ್ದೇಶಕರು ಸಂಭ್ರಮ ಹಂಚಿಕೊಂಡರು. 
    ನೂತನ ನಿರ್ದೇಶಕ ಬಿ.ಕೆ ಶಿವಕುಮಾರ್ ಮಾತನಾಡಿ, ನಿರ್ದೇಶಕರಾಗಿ ಆಯ್ಕೆಯಾಗಿರುವುದು ತುಂಬಾ ಸಂತೋಷವನ್ನುಂಟು ಮಾಡಿದೆ. ನಿರ್ದೇಶಕರಾದ ನಾವೆಲ್ಲರೂ ಸಹ ಮುಂದಿನ ದಿನಗಳಲ್ಲಿ ಒಗ್ಗಟ್ಟಾಗಿ ಕೆಲಸ ಮಾಡುವ ಮೂಲಕ ಪ್ರಸ್ತುತ ಸಂಘದಲ್ಲಿ ೨೫೩ ಷೇರುದಾರರಿದ್ದು, ೨೫ ಲಕ್ಷ ರು. ನಷ್ಟದಲ್ಲಿ ಮುನ್ನಡೆಯುತ್ತಿದೆ. ಸಂಘವನ್ನು ಸಾಲದಿಂದ ಮುಕ್ತಿಗೊಳಿಸಿ ರೈತರಿಗೆ ಹೆಚ್ಚಿನ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುವುದಾಗಿ ಭರವಸೆ ನೀಡಿದರು. 
    ನೂತನ ನಿರ್ದೇಶಕರಾದ ತಳ್ಳಿಕಟ್ಟೆ ಕ್ಷೇತ್ರದ ಎಚ್. ಲೋಕೇಶಪ್ಪ, ಜಯನಗರ ಕ್ಷೇತ್ರದ ರವೀಂದ್ರನಾಯ್ಡು, ಕೆಂಚೇನಹಳ್ಳಿ ಕ್ಷೇತ್ರದ ಸುರೇಶ್, ಭದ್ರಾವತಿ ಕ್ಷೇತ್ರದ ಬಿ.ಟಿ ನಾಗರಾಜ್, ಬಾರಂದೂರು ಕ್ಷೇತ್ರದ ಡಿ. ಶಿವಶಂಕರ್, ಮಾರಶೆಟ್ಟಿಹಳ್ಳಿ ಕ್ಷೇತ್ರದ ಕೆ. ಶ್ರೀನಿವಾ, ಅಗಸನಹಳ್ಳಿ ಕ್ಷೇತ್ರದ ಕೃಷ್ಣಪ್ಪ, ಕೊಮಾರನಹಳ್ಳಿ ಕ್ಷೇತ್ರದ ಸತ್ಯನಾರಾಯಣರಾವ್, ತಡಸ ಕ್ಷೇತ್ರದ ಖಲೀಂ ಉಲ್ಲಾ, ತಳ್ಳಿಕಟ್ಟೆ ಕ್ಷೇತ್ರದ ಓ.ಎನ್ ರತ್ನಮ್ಮ ಹಾಗು ಭದ್ರಾವತಿ ಕ್ಷೇತ್ರದ ವಿನೋದಬಾಯಿ ಉಪಸ್ಥಿತರಿದ್ದು ಸಂಭ್ರಮ ಹಂಚಿಕೊಂಡರು. 
    ಸಹಕಾರಿ ಕ್ಷೇತ್ರದಲ್ಲೂ ಕಾಂಗ್ರೆಸ್ ಮುಂಚೂಣಿ: 
    ನೂತನ ನಿರ್ದೇಶಕರನ್ನು ಅಭಿನಂದಿಸಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಎಸ್. ಕುಮಾರ್ ಮತ್ತು ಗ್ರಾಮಾಂತರ ಅಧ್ಯಕ್ಷ ಎಚ್.ಎಲ್ ಷಡಾಕ್ಷರಿಯವರು, ಈ ಚುನಾವಣೆಯಲ್ಲಿ ೮ ಕ್ಷೇತ್ರಗಳಿಂದ ಒಟ್ಟು ೧೭ ಮಂದಿ ಸ್ಪರ್ಧಿಸಿ, ೮ ಮಂದಿ ಆಯ್ಕೆಯಾಗಿದ್ದಾರೆ. ಉಳಿದ ೫ ಮಂದಿ ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಒಟ್ಟು ೧೩ ನಿರ್ದೇಶಕರ ನೂತನ ಆಡಳಿತ ಮಂಡಳಿ ಅಸ್ತಿತ್ವಕ್ಕೆ ಬಂದಿದೆ. ಎಲ್ಲಾ ೧೩ ನಿರ್ದೇಶಕರು ಸಹ ಕಾಂಗ್ರೆಸ್ ಬೆಂಬಲಿತರಾಗಿದ್ದು, ಕಾಂಗ್ರೆಸ್ ಸಹಕಾರಿ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿದೆ. ವಿಶೇಷವಾಗಿ ಶಾಸಕರ ಸಹೋದರ ಬಿ.ಕೆ ಶಿವಕುಮಾರ್‌ರವರು ಆಯ್ಕೆಯಾಗಿರುವುದು ಸಂಘಕ್ಕೆ ಹೆಚ್ಚಿನ ಬಲಬಂದಿದೆ. ಮುಂದಿನ ದಿನಗಳಲ್ಲಿ ಸಂಘ ಹೆಚ್ಚಿನ ಬೆಳವಣಿಗೆ ಹೊಂದುವ ಮೂಲಕ ರೈತರ ನೆರವಿಗೆ ಮುಂದಾಗುವ ವಿಶ್ವಾಸವಿದೆ ಎಂದರು. ಪ್ರಮುಖರಾದ ದಶರಥಗಿರಿ, ಬಸವಂತಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ