ರಾಜ್ಯ ಅಸಂಘಟಿತ ಕಾರ್ಮಿಕರ ಸಂಘ ಭದ್ರಾವತಿ ನಗರ ಮತ್ತು ಗ್ರಾಮಾಂತರ ಘಟಕಗಳ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜಿಲ್ಲಾಧ್ಯಕ್ಷ ರಮೇಶ್ ಮಡಿವಾಳ ಬಂದಗದ್ದೆರವರ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ನಡೆಯಿತು.
ಭದ್ರಾವತಿ : ರಾಜ್ಯ ಅಸಂಘಟಿತ ಕಾರ್ಮಿಕರ ಸಂಘ ಗ್ರಾಮಾಂತರ ಮತ್ತು ನಗರ ಘಟಕಗಳ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜಿಲ್ಲಾಧ್ಯಕ್ಷ ರಮೇಶ್ ಮಡಿವಾಳ ಬಂದಗದ್ದೆರವರ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ನಡೆಯಿತು.
ರಾಜ್ಯಾಧ್ಯಕ್ಷ ಪ್ರದೀಪ್ ಹೊನ್ನಪ್ಪ, ರಾಜ್ಯ ಕಾರ್ಯದರ್ಶಿ ಸುರೇಖಾ ಪಾಲಾಕ್ಷಪ್ಪ, ಜಿಲ್ಲಾ ಉಪಾಧ್ಯಕ್ಷೆ ಅಶ್ವಿನಿ ಗೌಡ, ತಾಲೂಕು ನಗರ ಅಧ್ಯಕ್ಷೆ ರೂಪ ನಾಗರಾಜ್, ಗ್ರಾಮಾಂತರ ಅಧ್ಯಕ್ಷೆ ಶಕುಂತಲಾ ಪ್ರದೀಪ್ ಅರಳಿಹಳ್ಳಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಡ್ರೈವರ್, ಕ್ಲೀನರ್, ಹೆಲ್ಪರ್, ಮೆಕ್ಯಾನಿಕ್, ಬ್ಯೂಟಿಷಿಯನ್, ಪೈಂಟರ್, ಹಮಾಲಿ, ಹೋಟೆಲ್ ಕೂಲಿ ಕಾರ್ಮಿಕರುಗಳು, ದಿನಗೂಲಿ ಕಾರ್ಮಿಕರು ಸೇರಿದಂತೆ ಎಲ್ಲಾ ತರಹದ ಅಸಂಘಟಿತ ಕಾರ್ಮಿಕರಿಗೆ ಇಲಾಖೆಯಿಂದ ಲಭ್ಯವಾಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲಾಯಿತು
ತಾಲೂಕು ನಗರ ಸಮಿತಿ ನೂತನ ಪದಾಧಿಕಾರಿಗಳು :
ಅಧ್ಯಕ್ಷೆ ರೂಪ ನಾಗರಾಜ್, ಪ್ರಧಾನ ಕಾರ್ಯದರ್ಶಿ ರೂಪ ಮಲ್ಲಿಕಾರ್ಜುನ್ ಹೆಬ್ಬಂಡಿ, ಉಪಾಧ್ಯಕ್ಷರು ಎಚ್. ಮಂಜುನಾಥ್ ಜನ್ನಾಪುರ, ಅನ್ನಪೂರ್ಣ ಉಜ್ಜನಿಪುರ, ಮಂಜುಳ ನಾಗರಾಜ್ ಬಿಹೆಚ್ ರಸ್ತೆ, ಸಂಘಟನಾ ಕಾರ್ಯದರ್ಶಿ ದೀಕ್ಷಿತ್ ಗೌಡ ಕಬಳಿಕಟ್ಟೆ, ಕಾರ್ಯದರ್ಶಿಗಳು ಲತಾ, ಕವಿತ, ಭಾಗ್ಯ ಮಾರುತಿ ನಗರ, ಹೇಮಾ, ರುಕ್ಮಿಣಿ ಹೊಸಮನೆ, ನಿರ್ಮಲ ಮತ್ತು ರೂಪ ಮಹೇಶ್ ಇವರುಗಳನ್ನು ಆಯ್ಕೆ ಮಾಡಲಾಯಿತು.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ