ಉಮೇಶ್ ಗುಜ್ಜಾರ್
ಭದ್ರಾವತಿ : ಭಾವಸಾರ ಕ್ಷತ್ರಿಯ ಕೋ-ಆಪರೇಟಿವ್ ಸೊಸೈಟಿ ಮಾಜಿ ನಿರ್ದೇಶಕ ಹಾಗು ಗುಜ್ಜಾರ್ ಸಮಿತಿ ಉಪಾಧ್ಯಕ್ಷ ಉಮೇಶ್ ಗುಜ್ಜಾರ್(೫೮) ಹೃಧಯಾಘಾತದಿಂದ ಅವರ ನಿವಾಸದಲ್ಲಿ ನಿಧನ ಹೊಂದಿದರು.
ಭಾವಸಾರ ಕ್ಷತ್ರಿಯ ಮಹಿಳಾ ಮಂಡಳಿ ಅಧ್ಯಕ್ಷೆ, ಪತ್ನಿ ಕಲ್ಪನಾ ಇದ್ದಾರೆ. ಇವರ ಅಂತ್ಯಕ್ರಿಯೆ ಹೊಳೆಹೊನ್ನೂರು ರಸ್ತೆಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ಮಂಗಳವಾರ ಸಂಜೆ ನೆರವೇರಿತು.
ಇವರ ನಿಧನಕ್ಕೆ ಪಾಂಡುರಂಗ ಸೇವಾ ಬಳಗ, ಭಾವಸಾರ ಸಮಾಜ, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಆಭರಣ ವ್ಯಾಪಾರಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ