ಗುರುವಾರ, ಅಕ್ಟೋಬರ್ 16, 2025

ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷರಾಗಿ ಬಿ.ಎ ಮಂಜುನಾಥ್ ನೇಮಕ

ಶಿವಮೊಗ್ಗ ಜಿಲ್ಲಾ ಸಾಂಸ್ಕೃತಿಕ ಕಲಾವಿದರ ಸಂಘದ ಅಧ್ಯಕ್ಷ, ನಿವೃತ್ತ ಸರ್ಕಾರಿ ನೌಕರ ಬಿ.ಎ ಮಂಜುನಾಥ್‌ರವರನ್ನು ಭದ್ರಾವತಿ ನಗರ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷರನ್ನಾಗಿ ನೇಮಕಗೊಳಿಸಲಾಗಿದೆ. 
    ಭದ್ರಾವತಿ : ಶಿವಮೊಗ್ಗ ಜಿಲ್ಲಾ ಸಾಂಸ್ಕೃತಿಕ ಕಲಾವಿದರ ಸಂಘದ ಅಧ್ಯಕ್ಷ, ನಿವೃತ್ತ ಸರ್ಕಾರಿ ನೌಕರ ಬಿ.ಎ ಮಂಜುನಾಥ್‌ರವರನ್ನು ನಗರ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷರನ್ನಾಗಿ ನೇಮಕಗೊಳಿಸಲಾಗಿದೆ. 
    ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಆರ್. ಧರ್ಮಸೇನರವರ ಆದೇಶ ಹಾಗು ಶಾಸಕ ಬಿ.ಕೆ ಸಂಗಮೇಶ್ವರ್‌ರವರ ಸೂಚನೆ ಮೇರೆಗೆ ಮತ್ತು ಜಿಲ್ಲಾಧ್ಯಕ್ಷ ಆರ್. ಪ್ರಸನ್ನಕುಮಾರ್‌ರವರ ಶಿಫಾರಸ್ಸಿನ ಮೇರೆಗೆ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾಧ್ಯಕ್ಷ ಆರ್. ಶಿವಣ್ಣ ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ. 
    ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತಗಳಿಗೆ ಬದ್ಧರಾಗಿ ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರನ್ನು ಸಂಘಟಿಸುವ ಮೂಲಕ ಪಕ್ಷವನ್ನು ಇನ್ನೂ ಹೆಚ್ಚಿನ ರೀತಿಯಲ್ಲಿ ಬಲಪಡಿಸಬೇಕೆಂದು ಸೂಚಿಸಲಾಗಿದೆ. 
    ನೂತನ ನಗರ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಿ.ಎ ಮಂಜುನಾಥ್‌ರವರನ್ನು ಶಾಸಕ ಬಿ.ಕೆ ಸಂಗಮೇಶ್ವರ್, ಪ್ರಮುಖರಾದ ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಎಸ್. ಕುಮಾರ್, ಗ್ರಾಮಾಂತರ ಅಧ್ಯಕ್ಷ ಎಚ್.ಎಲ್ ಷಡಾಕ್ಷರಿ, ಶಿವಮೊಗ್ಗ ಜಿಲ್ಲಾ ಸಾಂಸ್ಕೃತಿಕ ಕಲಾವಿದರ ಸಂಘದ ಪ್ರಮುಖರು ಸೇರಿದಂತೆ ಇನ್ನಿತರರು ಅಭಿನಂದಿಸಿದ್ದಾರೆ. 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ