ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯಲ್ಲಿ ಬುಧವಾರ ವಿಐಎಸ್ಎಲ್ ಆಸ್ಪತ್ರೆ ಮತ್ತು ಶಿವಮೊಗ್ಗ ಸಹ್ಯಾದ್ರಿ ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸಹಯೋಗದೊಂದಿಗೆ ಉಚಿತ ಹೃದಯ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು.
ಭದ್ರಾವತಿ: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯಲ್ಲಿ ಬುಧವಾರ ವಿಐಎಸ್ಎಲ್ ಆಸ್ಪತ್ರೆ ಮತ್ತು ಶಿವಮೊಗ್ಗ ಸಹ್ಯಾದ್ರಿ ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸಹಯೋಗದೊಂದಿಗೆ ಉಚಿತ ಹೃದಯ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು.
ಶಿಬಿರದಲ್ಲಿ ರಕ್ತದೊತ್ತಡ(ಬಿಪಿ) ತಪಾಸಣೆ, ಜಿಆರ್ಬಿಎಸ್(ಮಧುಮೇಹ) ತಪಾಸಣೆ, ೨ಡಿ ಏಕೋ, ಇಸಿಜಿ ತಪಾಸಣೆ ನಡೆಸಲಾಯಿತು. ಸಹ್ಯಾದ್ರಿ ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಹೃದಯ ತಜ್ಞರಾದ ಡಾ. ಭರತ್ ಗೌಡ ಮತ್ತು ಡಾ.ಎಚ್.ಜೆ ಶಶಾಂಕ್ ವೈಧ್ಯಕೀಯ ಸಲಹೆ ನೀಡಿದರು. ಸಹಾಯಕರಾದ ರಂಜಿತ, ವೀಣಾ, ನಿತ್ಯ, ಗಣೇಶ್ ಮತ್ತು ಮಣಿಕಂಠ ಮತ್ತು ವಿಐಎಎಲ್ ಆಸ್ಪತ್ರೆಯ ಅಲೆನ್ ಪಿಂಟೋ, ಪುಷ್ಪಲತಾ, ಜಿ. ಪ್ರಕಾಶ್, ಉಮೇಶ್, ರಮೇಶ್ ಮತ್ತು ಕಿರಿಯ ಅಧಿಕಾರಿ ಎಂ.ಎಲ್. ಯೋಗೀಶ್ ಉಚಿತ ತಪಾಸಣೆಗೆ ನೆರವಾದರು.
ವಿಐಎಸ್ಎಲ್ನ ಮಾನವ ಸಂಪನ್ಮೂಲ ಇಲಾಖೆ, ಆಸ್ಪತ್ರೆ ಇಲಾಖೆ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಗಳಿಂದ ಶಿಬಿರ ಸಂಯೋಜಿಸಲಾಗಿತ್ತು.
ವಿಐಎಸ್ಎಲ್ ಆಸ್ಪತ್ರೆ ಹೆಚ್ಚುವರಿ ಮುಖ್ಯ ವೈದ್ಯಾಧಿಕಾರಿ ಡಾ. ಸುಜೀತ್ ಕುಮಾರ್ ಮತ್ತು ಹೆಚ್.ಆರ್ ಹಾಗು ಸಾರ್ವಜನಿಕ ಸಂಪರ್ಕ ಮಹಾಪ್ರಬಂಧಕ ಎಲ್. ಪ್ರವೀಣ್ಕುಮಾರ್ ಶಿಬಿರದ ಮೇಲುಸ್ತುವಾರಿ ವಹಿಸಿದ್ದರು. ೧೫೯ಕ್ಕೂ ಹೆಚ್ಚು ಕಾಯಂ ಹಾಗು ಗುತ್ತಿಗೆ ಕಾರ್ಮಿಕರು ಶಿಬಿರದ ಸದುಪಯೋಗ ಪಡೆದುಕೊಂಡರು.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ