ಸೋಮವಾರ, ಅಕ್ಟೋಬರ್ 27, 2025

ಅ.೩೧ರಂದು ಇಂದಿರಾಗಾಂಧಿ ಪುಣ್ಯ ತಿಥಿ ಆಚರಣೆ : ಒಳರೋಗಿಗಳಿಗೆ ಹಣ್ಣು-ಬ್ರೆಡ್ ವಿತರಣೆ

    ಭದ್ರಾವತಿ : ಜಿಲ್ಲಾ ಕಾಂಗ್ರೆಸ್ ಸಮಿತಿ ಸೇವಾದಳ ತಾಲೂಕು ಘಟಕದಿಂದ ಅ.೩೧ರಂದು ದೇಶದ ಮಾಜಿ ಪ್ರಧಾನಿ ದಿವಂಗತ ಇಂದಿರಾಗಾಂಧಿಯವರ ಪುಣ್ಯ ತಿಥಿ ಆಯೋಜಿಸಲಾಗಿದೆ. 
    ಪ್ರತಿ ವರ್ಷ ಸೇವಾದಳ ಘಟಕದಿಂದ ಇಂದಿರಾಗಾಂಧಿಯವರ ಪುಣ್ಯ ತಿಥಿ ಆಚರಿಸಿಕೊಂಡು ಬರಲಾಗುತ್ತಿದ್ದು, ಈ ಬಾರಿ ಸಹ ಅಂದು ಬೆಳಿಗ್ಗೆ ೯.೩೦ಕ್ಕೆ ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಮತ್ತು ಬ್ರೆಡ್ ವಿತರಣೆ ನಡೆಯಲಿದೆ. 
    ಪಕ್ಷದ ಮುಖಂಡರು, ಸೇವಾದಳ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಸೇವಾದಳ ತಾಲೂಕು ಘಟಕದ ಅಧ್ಯಕ್ಷ ಕೆ.ಜೆ ಹನುಮಂತಯ್ಯ ಮತ್ತು ಪ್ರಧಾನ ಕಾರ್ಯದರ್ಶಿ ಚಂದ್ರಕುಮಾರ್ ಕೋರಿದ್ದಾರೆ. 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ