ಶುಕ್ರವಾರ, ಅಕ್ಟೋಬರ್ 10, 2025

ಅ.೧೧ರಂದು ಭೂಮಿಕಾದಿಂದ ವಿಶೇಷ ಕಾರ್ಯಕ್ರಮ

    ಭದ್ರಾವತಿ: ಕನ್ನಡ ನಾಡು ನಡೆ-ನುಡಿ ಬಿಂಬಿಸುವ ವೇದಿಕೆ ನಗರದ ಭೂಮಿಕಾ ವತಿಯಿಂದ ಅ.೧೧ರ ಶನಿವಾರ ಸಂಜೆ ೬ ಗಂಟೆಗೆ ಹಳೇನಗರದ ಶ್ರೀ ರಾಮೇಶ್ವರ ದೇವಸ್ಥಾನ ಹಿಂಭಾಗದಲ್ಲಿರುವ ಶ್ರೀ ಗಾಯಿತ್ರಿ ಧರ್ಮ ಶಾಲಾ ಭವನದಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ದಿವಂಗತ `ಶ್ರೀ ಮಾಸ್ತಿ ವೆಂಕಟೇಶ ಐಯ್ಯಂಗಾರ್‌ರವರ ಕಥಾಲೋಕ' ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 
    ಶಿವಮೊಗ್ಗ ನಿವೃತ್ತ ಪ್ರಾಂಶಪಾಲ ಡಾ.ಎಚ್.ಎಸ್ ನಾಗಭೂಷಣ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ವೇದಿಕೆ ಅಧ್ಯಕ್ಷ, ವೈದ್ಯ ಡಾ. ಕೃಷ್ಣ ಎಸ್. ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಶ್ರೀ ಮಾಸ್ತಿ ವೆಂಕಟೇಶ ಐಯ್ಯಂಗಾರ್‌ರವರ ಬದುಕು, ಬರಹ ಹಾಗು ಅವರ ಕಥೆಗಳಲ್ಲಿನ ಮೌಲ್ಯಗಳ ಕುರಿತು ಉಪನ್ಯಾಸ ನಡೆಯಲಿದೆ. ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಲಾಗಿದೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ