ಟಿ. ಪುಷ್ಪರಾಜ್
ಭದ್ರಾವತಿ : ನಗರಸಭೆ ವ್ಯಾಪ್ತಿಯ ಗಾಂಧಿನಗರದ ನಿವಾಸಿ, ಸೇಂಟ್ ಜೋಸೆಫ್ ಪಿಯು ಕಾಲೇಜ್ ಆಫ್ ಎಕ್ಸಲೆನ್ಸ್ ವಿದ್ಯಾಸಂಸ್ಥೆ ಟ್ರಸ್ಟ್ ಅಧ್ಯಕ್ಷ ಟಿ. ಪುಷ್ಪರಾಜ್(೬೧) ಸೋಮವಾರ ಹೊಂದಿದರು.
ಪತ್ನಿ, ಪುತ್ರ ಹಾಗು ಪುತ್ರಿ ಇದ್ದಾರೆ. ಇವರ ಅಂತ್ಯ ಸಂಸ್ಕಾರ ಮಂಗಳವಾರ ಬೆಳಗ್ಗೆ ೧೦ ಗಂಟೆಗೆ ನಡೆಯಲಿದೆ. ಅನಾರೋಗ್ಯಕ್ಕೆ ಒಳಗಾಗಿದ್ದ ಇವರು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪುಷ್ಪರಾಜ್ ಸಿವಿಲ್ ಎಂಜಿನಿಯರ್ ವೃತ್ತಿ ನಿರ್ವಹಿಸುತ್ತಿದ್ದರು.
ಇವರ ನಿಧನಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ ಶಿವಕುಮಾರ್, ನಗರಸಭೆ ಹಿರಿಯ ಸದಸ್ಯರಾದ ವಿ. ಕದಿರೇಶ್, ಬಿ.ಕೆ.ಮೋಹನ್, ವಿಐಎಸ್ಎಲ್ ಗುತ್ತಿಗೆದಾರ ಶಿವಾಜಿರಾವ್, ಎಲ್ಐಸಿ ಏಜೆಂಟ್ ಕೆ.ವಿ ಚಂದ್ರಶೇಖರ್, ಉದ್ಯಮಿ ಬಿ.ಕೆ ಜಗನ್ನಾಥ್, ವರ್ತಕರ ಸಂಘದ ಮಾಜಿ ಉಪಾಧ್ಯಕ್ಷ ಹರೀಶ್ಬಾಬು ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು, ಗಣ್ಯರು ಸಂತಾಪ ಸೂಚಿಸಿದ್ದಾರೆ.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ