ಗುರುವಾರ, ಅಕ್ಟೋಬರ್ 23, 2025

ನಿರುದ್ಯೋಗಿಗಳಿಗೆ ವಂಚನೆ ಆರೋಪ : ಖಾಸಗಿ ಕಂಪನಿ ವಿರುದ್ಧ ಪ್ರಕರಣ ದಾಖಲು

ಕಂಪನಿಗೆ ಬೀಗ ಜಡಿದ ತಹಸೀಲ್ದಾರ್ ನೇತೃತ್ವದ ತಂಡ 

ನಿರುದ್ಯೋಗಿಗಳಿಂದ ಸಾವಿರಾರು ರು. ಪಡೆದು ವಂಚಿಸಲಾಗುತ್ತಿದೆ ಎಂದು ಆರೋಪಿಸಿ ಭದ್ರಾವತಿ ನಗರದ ಬಿ.ಎಚ್ ರಸ್ತೆ ಲೋಯರ್ ಹುತ್ತಾದಲ್ಲಿ ಕಾರ್ಯ ನಿರ್ವಹಿಸುತ್ತಿರುವ ವೆಕ್ಸಾನ್ ಪ್ರೈವೇಟ್ ಲಿಮಿಟೆಡ್ ವಿರುದ್ಧ ಇತ್ತೀಚೆಗೆ ಪ್ರತಿಭಟನೆ ನಡೆಸಿ ಕ್ರಮ ಕೈಗೊಳ್ಳುವಂತೆ ಸ್ಥಳೀಯ ಹೋರಾಟಗಾರರು ಆಗ್ರಹಿಸಿದ್ದರು. ಈ ಹಿನ್ನಲೆಯಲ್ಲಿ ಗುರುವಾರ ತಹಸೀಲ್ದಾರ್ ಪರುಸಪ್ಪ ಕುರುಬರ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕಂಪನಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಅಲ್ಲದೆ ಕಂಪನಿಗೆ ಬೀಗ ಜಡಿಯಲಾಗಿದೆ. 
    ಭದ್ರಾವತಿ : ನಿರುದ್ಯೋಗಿಗಳಿಂದ ಸಾವಿರಾರು ರು. ಪಡೆದು ವಂಚಿಸಲಾಗುತ್ತಿದೆ ಎಂದು ಆರೋಪಿಸಿ ನಗರದ ಬಿ.ಎಚ್ ರಸ್ತೆ ಲೋಯರ್ ಹುತ್ತಾದಲ್ಲಿ ಕಾರ್ಯ ನಿರ್ವಹಿಸುತ್ತಿರುವ ವೆಕ್ಸಾನ್ ಪ್ರೈವೇಟ್ ಲಿಮಿಟೆಡ್ ವಿರುದ್ಧ ಇತ್ತೀಚೆಗೆ ಪ್ರತಿಭಟನೆ ನಡೆಸಿ ಕ್ರಮ ಕೈಗೊಳ್ಳುವಂತೆ ಸ್ಥಳೀಯ ಹೋರಾಟಗಾರರು ಆಗ್ರಹಿಸಿದ್ದರು. 
ರಾಜ್ಯದ ಧಾರವಾಡ, ಹುಬ್ಬಳ್ಳಿ, ರಾಯಚೂರು ಸೇರಿದಂತೆ ಸುತ್ತ ಮುತ್ತಲ ಜಿಲ್ಲೆಗಳಿಂದ ನೂರಾರು ಯುವಕ, ಯುವತಿಯರನ್ನು ಕರೆತಂದು ಅವರಿಂದ ಸಾವಿರಾರು ರು. ಹಣ ಪಡೆದು ಪ್ರೊಡೆಕ್ಟ್ ಹೆಸರಲ್ಲಿ ವಂಚಿಸಲಾಗುತ್ತಿದೆ ಎಂದು ಪ್ರತಿಭಟನೆ ನಡೆಸಿ ಆರೋಪಿಸಲಾಗಿತ್ತು. 
    ಈ ಕಂಪನಿಯ ಗುಟ್ಟು ಹೊರಬರಬಾರದು ಎಂದು ಸ್ಥಳೀಯರಿಗೆ ಉದ್ಯೋಗ ನೀಡದೆ ವಂಚಿಸುತ್ತಿದ್ದಾರೆ. ಅಲ್ಲದೆ ಕರ್ತವ್ಯ ನಿರ್ವಹಿಸುತ್ತಿರುವ ಯುವಕರಿಗೆ ಯಾವುದೇ ಸಾರಿಗೆ, ಸಂಬಳ, ಭತ್ಯೆ ಇತ್ಯಾದಿ ಭದ್ರತೆ ಇರುವುದಿಲ್ಲ. ಕಾರ್ಮಿಕ ಇಲಾಖೆಯ ನೋಂದಣಿಯಾಗಲಿ ಇರುವುದಿಲ್ಲ. ಈ ಹಿನ್ನಲೆಯಲ್ಲಿ ತಕ್ಷಣ ಈ ಕಂಪನಿಯ ವಿರುದ್ದ ದೂರು ದಾಖಲಿಸಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಗ್ರೇಡ್-೨ ತಹಸೀಲ್ದಾರ್ ಮಂಜನಾಯ್ಕ್ ರವರಿಗೆ ಮನವಿ ಸಲ್ಲಿಸಲಾಗಿತ್ತು. 
ಈ ಹಿನ್ನಲೆಯಲ್ಲಿ ಗುರುವಾರ ತಹಸೀಲ್ದಾರ್ ಪರುಸಪ್ಪ ಕುರುಬರ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕಂಪನಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಅಲ್ಲದೆ ಕಂಪನಿಗೆ ಬೀಗ ಜಡಿಯಲಾಗಿದೆ. 
ಹೋರಾಟಗಾರರಾದ ಕೆ. ಮಂಜುನಾಥ್, ನಗರಸಭೆ ಸದಸ್ಯ ಐ.ವಿ ಸಂತೋಷ್‌ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ