ಸೋಮವಾರ, ನವೆಂಬರ್ 3, 2025

ಟಿಎಪಿಸಿಎಂಎಸ್ ಅಧ್ಯಕ್ಷರಾಗಿ ೨ನೇ ಬಾರಿಗೆ ತಳ್ಳಿಕಟ್ಟೆ ಎಚ್. ಲೋಕೇಶ್, ಉಪಾಧ್ಯಕ್ಷರಾಗಿ ಡಿ. ಶಿವಶಂಕರ್ ಆಯ್ಕೆ

ಭದ್ರಾವತಿ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ(ಟಿಎಪಿಸಿಎಂಎಸ್)ದ ಅಧ್ಯಕ್ಷರಾದ ಎರಡನೇ ಬಾರಿಗೆ ತಳ್ಳಿಕಟ್ಟೆ ಎಚ್. ಲೋಕೇಶಪ್ಪ ಆಯ್ಕೆಯಾಗಿದ್ದಾರೆ. 
    ಭದ್ರಾವತಿ : ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ(ಟಿಎಪಿಸಿಎಂಎಸ್)ದ ಅಧ್ಯಕ್ಷರಾದ ಎರಡನೇ ಬಾರಿಗೆ ತಳ್ಳಿಕಟ್ಟೆ ಎಚ್. ಲೋಕೇಶಪ್ಪ ಆಯ್ಕೆಯಾಗಿದ್ದಾರೆ. 
    ಮೊದಲ ಬಾರಿಗೆ ಉಪಾಧ್ಯಕ್ಷರಾಗಿ ಬಾರಂದೂರು ಕ್ಷೇತ್ರದ ಡಿ. ಶಿವಶಂಕರ್ ಆಯ್ಕೆಯಾಗಿದ್ದಾರೆ. ನಿರ್ದೇಶಕರಾದ ಬಿ.ಕೆ ಶಿವಕುಮಾರ್,  ಜಯನಗರ ಕ್ಷೇತ್ರದ ರವೀಂದ್ರನಾಯ್ಡು, ಕೆಂಚೇನಹಳ್ಳಿ ಕ್ಷೇತ್ರದ ಸುರೇಶ್, ಭದ್ರಾವತಿ ಕ್ಷೇತ್ರದ ಬಿ.ಟಿ ನಾಗರಾಜ್, ಮಾರಶೆಟ್ಟಿಹಳ್ಳಿ ಕ್ಷೇತ್ರದ ಕೆ. ಶ್ರೀನಿವಾಸ್, ಅಗಸನಹಳ್ಳಿ ಕ್ಷೇತ್ರದ ಕೃಷ್ಣಪ್ಪ, ಕೊಮಾರನಹಳ್ಳಿ ಕ್ಷೇತ್ರದ ಸತ್ಯನಾರಾಯಣರಾವ್, ತಡಸ ಕ್ಷೇತ್ರದ ಖಲೀಂ ಉಲ್ಲಾ, ತಳ್ಳಿಕಟ್ಟೆ ಕ್ಷೇತ್ರದ ಓ.ಎನ್ ರತ್ನಮ್ಮ ಹಾಗು ಭದ್ರಾವತಿ ಕ್ಷೇತ್ರದ ವಿನೋದಬಾಯಿ ಉಪಸ್ಥಿತರಿದ್ದರು. 
    ಇತ್ತೀಚೆಗೆ ಸಂಘದ ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆದು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ವಿಚೇತರಾಗಿದ್ದರು. ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಶಾಸಕ ಬಿ.ಕೆ ಸಂಗಮೇಶ್ವರ್ ಸೇರಿದಂತೆ ಇನ್ನಿತರರು ಅಭಿನಂದಿಸಿದ್ದಾರೆ. 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ