ಪ್ರತಿ ವರ್ಷದಂತೆ ಈ ವರ್ಷ ಸಹ ಭದ್ರಾವತಿ ಹಳೇನಗರದ ಶ್ರೀ ರಾಘವೇಂದ್ರ ಸ್ವಾಮಿಗಳವರ ಮಠದಲ್ಲಿ ಆಶ್ಲೇಷ ಬಲಿ ಪೂಜೆ ಬುಧವಾರ ವಿಜೃಂಭಣೆಯಿಂದ ಜರುಗಿತು.
ಭದ್ರಾವತಿ: ಪ್ರತಿ ವರ್ಷದಂತೆ ಈ ವರ್ಷ ಸಹ ಹಳೇನಗರದ ಶ್ರೀ ರಾಘವೇಂದ್ರ ಸ್ವಾಮಿಗಳವರ ಮಠದಲ್ಲಿ ಆಶ್ಲೇಷ ಬಲಿ ಪೂಜೆ ಬುಧವಾರ ವಿಜೃಂಭಣೆಯಿಂದ ಜರುಗಿತು.
ಬೆಳಗ್ಗೆ ನಿರ್ಮಾಲ್ಯ, ಪಂಚಾಮೃತ ಅಭಿಷೇಕ, ನಂತರ ಹೋಮ ಸೇರಿದಂತೆ ಇನ್ನಿತರ ಆಚರಣೆಗಳು ಜರುಗಿದವು. ಮಧ್ಯಾಹ್ನ ೧೨ ಗಂಟೆಗೆ ಆಶ್ಲೇಷ ಬಲಿ ಪೂಜೆ ನಡೆಯಿತು. ಪಂಡಿತರಾದ ಗೋಪಾಲಕೃಷ್ಣ ಆಚಾರ್ ಮತ್ತು ಅರ್ಚಕ ಪ್ರಮೋದ್ ಕುಮಾರ್ ನೇತೃತ್ವದ ತಂಡ ಧಾರ್ಮಿಕ ಆಚರಣೆಗಳನ್ನು ನೆರವೇರಿಸಿತು.
ಗುರುರಾಜ ಸೇವಾ ಸಮಿತಿಯ ಅಧ್ಯಕ್ಷ ಮುರುಳಿಧರ್ ತಂತ್ರಿ, ಉಪಾಧ್ಯಕ್ಷರಾದ ಸುಮಾ ರಾಘವೇಂದ್ರ, ಪ್ರಧಾನ ಕಾರ್ಯದರ್ಶಿ ಕೆ. ರಮಾಕಾಂತ, ನಿರಂಜನಾಚಾರ್ಯ ಹಾಗೂ ಪ್ರಧಾನ ಅರ್ಚಕ ಮಾಧುರಾವ್, ಸಮೀರಾಚಾರ್, ಸುಧೀಂದ್ರ ಮತ್ತು ಜಯತೀರ್ಥ ಸೇರಿದಂತೆ ಸಿದ್ದಾರೂಢನಗರ, ಕನಕನಗರ, ಹಳೇನಗರ, ಭೂತನಗುಡಿ, ಹೊಸಮನೆ, ಜನ್ನಾಪುರ, ನ್ಯೂಟೌನ್, ಹುತ್ತಾಕಾಲೋನಿ ಸೇರಿದಂತೆ ನಗರದ ವಿವಿಧೆಡೆಗಳಿಂದ ಭಕ್ತರು ಪಾಲ್ಗೊಂಡಿದ್ದರು.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ