ಬುಧವಾರ, ನವೆಂಬರ್ 5, 2025

ಇಬ್ಬರು ಕಳ್ಳರ ಬಂಧನ : ೫.೪೦ ಲಕ್ಷ ರು. ಮೌಲ್ಯದ ೧೪ ದ್ವಿಚಕ್ರ ವಾಹನಗಳು ವಶಕ್ಕೆ

ಹಳೇನಗರ ಪೊಲೀಸರ ಯಶಸ್ವಿ ಕಾರ್ಯಾಚರಣೆ 

ಇಬ್ಬರು ದ್ವಿಚಕ್ರ ವಾಹನ ಕಳ್ಳರನ್ನು ಬಂಧಿಸಿ ವಿವಿಧ ಜಿಲ್ಲೆಗಳಲ್ಲಿ ಕಳ್ಳತನ ಮಾಡಲಾಗಿದ್ದ ೧೪ ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಭದ್ರಾವತಿ ಹಳೇನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. 
    ಭದ್ರಾವತಿ: ಇಬ್ಬರು ದ್ವಿಚಕ್ರ ವಾಹನ ಕಳ್ಳರನ್ನು ಬಂಧಿಸಿ ವಿವಿಧ ಜಿಲ್ಲೆಗಳಲ್ಲಿ ಕಳ್ಳತನ ಮಾಡಲಾಗಿದ್ದ ೧೪ ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಹಳೇನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. 
    ಶಿವಮೊಗ್ಗ ಟಿಪ್ಪುನಗರದ ನಿವಾಸಿ ಶಾದಾಬ್ ಖಾನ್(೨೩) ಹಾಗೂ ದಾವಣಗೆರೆ ಜಿಲ್ಲೆ, ಚನ್ನಗಿರಿ ತಾಲೂಕು, ನೆಲ್ಲೂರು ಗ್ರಾಮದ ನಿವಾಸಿ ಶಹಬಾಜ್ ಅಹ್ಮದ್(೨೪) ಇಬ್ಬರು ಕಳ್ಳರನ್ನು ಬಂಧಿಸಿ ಒಟ್ಟು ಅಂದಾಜು ೫.೪೦ ಲಕ್ಷ ರು. ಮೌಲ್ಯದ ಒಟ್ಟು ೧೪ ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ಇಬ್ಬರು ಕಳ್ಳರನ್ನು ಹಾಜರು ಪಡಿಸಲಾಗಿದೆ.
    ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ ಮಿಥುನ್ ಕುಮಾರ್, ಹೆಚ್ಚುವರಿ ರಕ್ಷಣಾಧಿಕಾರಿಗಳಾದ ಎ.ಜಿ ಕಾರಿಯಪ್ಪ ಮತ್ತು ರಮೇಶ್, ಉಪ ಪೊಲೀಸ್ ಅಧೀಕ್ಷಕ ಅರವಿಂದ್ ಹಾಗು ನಗರವೃತ್ತ ನಿರೀಕ್ಷಕ ಶ್ರೀಶೈಲ ಕುಮಾರ್‌ರವರ ಮಾರ್ಗದರ್ಶನದಲ್ಲಿ ಹಳೆನಗರ ಪೊಲೀಸ್ ಠಾಣೆ ಉಪ ನಿರೀಕ್ಷಕ ಸುನೀಲ್ ಬಿ ತೇಲಿರವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ಸಿಬ್ಬಂದಿಗಳಾದ ಹಾಲಪ್ಪ, ಚಿನ್ನಾನಾಯ್ಕ, ರಾಘವೇಂದ್ರ, ಮೌನೇಶ್, ಚಿಕ್ಕಪ್ಪ, ಉದಯ, ರಾಜು ಮತ್ತು ಪ್ರಫುಲ್ಲ  ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ