ಸೋಮವಾರ, ನವೆಂಬರ್ 10, 2025

ಸರ್ವರಿಗೂ ಸಮಪಾಲು, ಸರ್ವರಿಗೂ ಸಮ ಬಾಳು ಕಾಂಗ್ರೆಸ್ ಧ್ಯೇಯ : ಧರ್ಮಕುಮಾರ್ 

ಜೆಡಿಎಸ್ ಗ್ರಾಮಾಂತರ ಅಧ್ಯಕ್ಷ ಸ್ಥಾನ ತೊರೆದು ಬೆಂಬಲಿಗರೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ 

ಭದ್ರಾವತಿ ತಾಲೂಕಿನ ಅತ್ತಿಗುಂದ ಗ್ರಾಮದ ಮುಖಂಡ, ಜೆಡಿಎಸ್ ಪಕ್ಷದ ಗ್ರಾಮಾಂತರ ಘಟಕದ ಅಧ್ಯಕ್ಷ ಧರ್ಮಕುಮಾರ್ ತಮ್ಮ ಬೆಂಬಲಿಗರೊಂದಿಗೆ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. 
ಭದ್ರಾವತಿ:  ಕಾಂಗ್ರೆಸ್ ಪಕ್ಷ ತನ್ನದೇ ಆದ ಇತಿಹಾಸ, ಪರಂಪರೆ ಹೊಂದಿದೆ. ಸರ್ವರಿಗೂ ಸಮಪಾಲು, ಸರ್ವರಿಗೂ ಸಮ ಬಾಳು ಎಂಬ ಧ್ಯೇಯೋದ್ದೇಶ ಹೊಂದಿದೆ. ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಲೋಕಕಲ್ಯಾಣಾರ್ಥವಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ಜ್ಯಾತ್ಯಾತೀತವಾಗಿ ಅನುಷ್ಠಾನಗೊಳಿಸುವಲ್ಲಿ ಯಶಸ್ವಿಯಾಗಿದೆ. ಇದರೊಂದಿಗೆ ಆರ್ಥಿಕ ಸದೃಢತೆ, ಶಿಕ್ಷಣ ಕ್ಷೇತ್ರಕ್ಕೂ ಸಹ ಪ್ರಾಮುಖ್ಯತೆ ನೀಡಿ ಸರ್ವರಿಗೂ ಉತ್ತಮವಾದ ಜೀವನ ನಡೆಸಲು ಹಲವು ಯೋಜನೆಗಳನ್ನು ರೂಪಿಸಿದೆ ಎಂದು ತಾಲೂಕಿನ ಅತ್ತಿಗುಂದ ಗ್ರಾಮದ ಮುಖಂಡ, ಜೆಡಿಎಸ್ ಪಕ್ಷದ ಗ್ರಾಮಾಂತರ ಘಟಕದ ಅಧ್ಯಕ್ಷ ಧರ್ಮಕುಮಾರ್ ಬಣ್ಣಿಸಿದರು. 
    ಅವರು ತಮ್ಮ ಬೆಂಬಲಿಗರೊಂದಿಗೆ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡು ಮಾತನಾಡಿದರು. 
    ನಮ್ಮೂರು ಅತ್ತಿಗುಂದ ಗ್ರಾಮ ತಾಲೂಕಿನಲ್ಲಿ ವಿಶಿಷ್ಟವಾದ ಪರಂಪರೆ ಹೊಂದಿರುವ ದೊಡ್ಡ ಗ್ರಾಮವಾಗಿದೆ. ಈ ಗ್ರಾಮ ಬಹಳ ಇಂದಿನಿಂದಲೂ ಕಾಂಗ್ರೆಸ್ ಪಕ್ಷದ ಬೀಡಾಗಿದ್ದು, ಈ ಪಕ್ಷಕ್ಕೆ ಸೇರ್ಪಡೆಗೊಂಡಿರುವುದು ಹೆಮ್ಮೆಯ ವಿಚಾರವಾಗಿದೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳಿಸಲು ಶಕ್ತಿ ಮೀರಿ ಶ್ರಮಿಸುತ್ತೇನೆ ಎಂದರು. 
     ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿ, ಕ್ಷೇತ್ರದಲ್ಲಿ ೪ ಬಾರಿ ಶಾಸಕರಾಗಿ ಆಯ್ಕೆಯಾಗಲು ಅತ್ತಿಗುಂದ ಗ್ರಾಮಸ್ಥರ ಸಹಕಾರ ಹೆಚ್ಚಿನದ್ದಾಗಿದೆ. ಕಾಂಗ್ರೆಸ್ ಪಕ್ಷವನ್ನು ಇಂದಿಗೂ ಬೆಂಬಲಿಸಿಕೊಂಡು ಬರುತ್ತಿದ್ದಾರೆ. ಗ್ರಾಮಸ್ಥರ ಋಣ ಎಂದಿಗೂ ತೀರಿಸಲು ಸಾಧ್ಯವಿಲ್ಲ. ನನ್ನನ್ನು ಬೆಂಬಲಿಸಿದಂತೆ ಮುಂದಿನ ಚುನಾವಣೆಯಲ್ಲಿ ತಮ್ಮ ಪುತ್ರ ಬಿ.ಎಸ್ ಗಣೇಶ್‌ರವರನ್ನು ಸಹ ಬೆಂಬಲಿಸಬೇಕೆಂದು ಮನವಿ ಮಾಡಿ, ಇದೀಗ ಗ್ರಾಮದ ಮುಖಂಡರು, ವಿದ್ಯಾವಂತರು, ಬುದ್ದಿವಂತರಾದ ಧರ್ಮಕುಮಾರ್‌ರವರು ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿರುವುದು ಸಂತಸ ತಂದಿದೆ ಎಂದರು. 
    ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಎಸ್. ಕುಮಾರ್,  ಗ್ರಾಮಾಂತರ ಅಧ್ಯಕ್ಷ ಎಚ್.ಎಲ್ ಷಡಕ್ಷರಿ, ಸರ್ಕಾರದ ಪಂಚ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಬಿ.ಎಸ್ ಗಣೇಶ್, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಡಿಸಿಸಿ ಬ್ಯಾಂಕ್ ಬಿ.ಕೆ ಶಿವಕುಮಾರ್, ಉದ್ಯಮಿ ಬಿ.ಕೆ ಜಗನ್ನಾಥ್, ನಗರಸಭೆ ಸ್ಟಾಯಿ ಸಮಿತಿ ಅಧ್ಯಕ್ಷ ರಿಯಾಜ್ ಅಹಮದ್ ಸದಸ್ಯರಾದ ಬಿ.ಎಂ ಮಂಜುನಾಥ್, ಬಸವರಾಜ ಬಿ. ಆನೆಕೊಪ್ಪ, ಮೆಸ್ಕಾಂ ಸಲಹಾ ಸಮಿತಿ ತಾಲೂಕು ಅಧ್ಯಕ್ಷ ಬಸವಂತಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ