ಎಲ್. ಸಂದೀಪ
ಭದ್ರಾವತಿ : ಚಿತ್ರದುರ್ಗ ತಾಲೂಕಿನ ಚೌಲಿಹಳ್ಳಿ ಗ್ರಾಮದ ಎಲ್. ಸಂದೀಪರವರು ಮಂಡಿಸಿದ್ದ `ಶಿಕ್ಷಕರ ಶಿಕ್ಷಣ ಸಂಸ್ಥೆಗಳ ಸಾಂಸ್ಥಿಕ ವಾತಾವರಣ, ಪ್ರಶಿಕ್ಷಕರ ವೃತ್ತಿ ನೈತಿಕತೆ ಮತ್ತು ಪ್ರಶಿಕ್ಷಕರ-ಪ್ರಶಿಕ್ಷಣಾರ್ಥಿಗಳ ಶೈಕ್ಷಣಿಕ ಸಂಬಂಧಗಳ ಅಧ್ಯಯನ' ವಿಷಯ ಕುರಿತ ಸಂಶೋಧನಾ ವರದಿಗೆ ಕುವೆಂಪು ವಿಶ್ವ ವಿದ್ಯಾಲಯದ ಡಾಕ್ಟರೇಟ್(ಪಿಎಚ್ಡಿ) ಪದವಿ ಲಭಿಸಿದೆ.
ವಿಶ್ವವಿದ್ಯಾಲಯದ ಶಿಕ್ಷಣಶಾಸ್ತ್ರ ತಜ್ಞರಾದ ಪ್ರೊ. ಜಗನ್ನಾಥ್ ಕೆ. ಡಾಂಗೆ ಅವರ ಮಾರ್ಗದರ್ಶನದಲ್ಲಿ ಸಂಶೋಧನಾ ವರದಿ ಮಂಡಿಸಿದ್ದರು. ಸಂದೀಪರವರು ಕೂಲಿ ಕಾರ್ಮಿಕರಾದ ಲೋಕೇಶ್ವರಪ್ಪ-ತಿಪ್ಪಮ್ಮ ದಂಪತಿ ಪುತ್ರರಾಗಿದ್ದಾರೆ. ಇವರು ಬಡತನದ ನಡುವೆಯೂ ಗಟ್ಟಿಯಾದ ಕನಸು, ದುಡಿಮೆ ಮತ್ತು ಅಧ್ಯಯನಶೀಲತೆಯನ್ನು ಜೀವವೈಖರಿಯಾಗಿಸಿಕೊಂಡಿದ್ದರು.
ಇವರ ಈ ಸಾಧನೆಗೆ ಸ್ನಾತಕೋತ್ತರ ಶಿಕ್ಷಣಶಾಸ್ತ್ರ ಮತ್ತು ಸಂಶೋಧನಾ ವಿಭಾಗದ ಅಧ್ಯಕ್ಷರು, ಪ್ರಾಧ್ಯಾಪಕರು, ಸಿಬ್ಬಂದಿವರ್ಗ, ಕುಟುಂಬದವರು ಮತ್ತು ಸ್ನೇಹಿತರು ಅಭಿನಂದನೆ ಸಲ್ಲಿಸಿದ್ದಾರೆ.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ